ಆ್ಯಪ್ನಗರ

ಸೂರಿಲ್ಲದವರಿಗೆ ಮೊದಲ ಹಂತದಲ್ಲಿ 92 ಸಾವಿರ ರೂ. ವಿತರಣೆ

ಬೆಳಗಾವಿ: ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ...

Vijaya Karnataka 13 Aug 2019, 5:00 am
ಬೆಳಗಾವಿ: ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರಕಾರ ಮೊದಲ ಹಂತದ ಪರಿಹಾರವಾಗಿ ಎನ್‌ಡಿಆರ್‌ಎಫ್‌ದಿಂದ 92,100 ರೂ. ಚೆಕ್‌ ವಿತರಿಸಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.
Vijaya Karnataka Web BEL-12 LBS 1


ನಗರದ ಸಾಯಿ ಭವನದಲ್ಲಿ ಸೋಮವಾರ ಸಂತ್ರಸ್ತರನ್ನು ಭೇಟಿ ಮಾಡಿ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಂಗಳವಾರದಿಂದ ಪ್ರವಾಹ ಪೀಡಿತ ಪ್ರದೇಶದ ಆಯಾ ಶಾಸಕರು, ಸಂಸದರು ಸೇರಿ ಚೆಕ್‌ ವಿತರಿಸಲಿದ್ದಾರೆ. ಮನೆ ಕಳೆದುಕೊಂಡವರಿಗೆ ಕೇಂದ್ರ ಸರಕಾರದ ಸಹಾಯ ಪಡೆದು ವಸತಿ ಯೊಜನೆಗಳ ಮೂಲಕ ಮನೆ ನಿರ್ಮಿಸಿ ಕೊಡಲಾಗುವುದು. ಮನೆ ಹಾನಿಯಾದವರಿಗೂ ಸರಕಾರ ಪರಿಹಾರ ನೀಡಲಿದೆ ಎಂದರು.

ರಸ್ತೆಗಳು, ಬೆಳೆಗಳ ಹಾನಿ ಸೇರಿದಂತೆ ಪ್ರವಾಹ ನಷ್ಟದ ಬಗ್ಗೆ ನಿಖರವಾದ ಮಾಹಿತಿ ತಿಳಿಯಲು ಇನ್ನೂ ಕೆಲವು ದಿನಗಳು ಬೇಕಾಗುವುದು. ಸಂಬಂಧಿಸಿದ ಅಧಿಕಾರಿಗಳು ಪ್ರವಾಹ ನಷ್ಟದ ವರದಿಯನ್ನು ಸರಕಾರಕ್ಕೆ ಯಥಾಸ್ಥಿತಿ ಕಳುಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರ ಒಟ್ಟಾಗಿ ಸೇರಿಕೊಂಡು ಸಂತ್ರಸ್ತರ ಬದುಕು ಕಟ್ಟಿಕೊಡಲು ಮುಂದಾಗಲಿವೆ. ಕೆಲವರು ದಾಖಲೆ ಪತ್ರಗಳನ್ನು ಸಹ ಕಳೆದುಕೊಂಡಿದ್ದಾರೆ. ಸರಕಾರದ ವ್ಯವಸ್ಥೆಯಲ್ಲಿ ದಾಖಲಾತಿಗಳು ಬೇಕು. ಆದರೆ, ಸಂತ್ರಸ್ತರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.

ಸಂತ್ರಸ್ತರಿಗೆ ಶೋಭಾ ಕರಂದ್ಲಾಜೆ ಅಗತ್ಯ ವಸ್ತುಗಳನ್ನು ವಿತರಿಸಿದರು. ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಾಜಿ ಶಾಸಕ ವಿಶ್ವನಾಥ ಪಾಟೀಲ, ಬಿಜೆಪಿ ಮುಖಂಡರಾದ ರಾಜೇಂದ್ರ ಹರಕುಣಿ, ರಾಜಕುಮಾರ ಟೋಪಣ್ಣವರ, ರಾಜು ಚಿಕ್ಕನಗೌಡರ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ