ಚಿಕ್ಕೋಡಿ: ಕೃಷ್ಣಾ ನದಿ ಪ್ರವಾಹದಲ್ಲಿ ಮನೆ ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಮನ ನೊಂದು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಕಲ್ಲೋಳ ಗ್ರಾಮದ ಅಪ್ಪಾಸಾಬ ಕಲ್ಲಪ್ಪಾ ಮಂಗಾವತಿ(50) ಮೃತಪಟ್ಟವರು. ಅವರು ಕಳೆದ ತಿಂಗಳು ಸಾಲ ಮಾಡಿ ಕಬ್ಬು ಬೆಳೆದಿದ್ದು ಭಾನುವಾರವಷ್ಟೇ ಕೃಷ್ಣಾ ನದಿ ನೀರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪರಿಶೀಲಿಸಲು ಹೊಲಕ್ಕೆ ಹೋದಾಗ ಕಬ್ಬು ಬೆಳೆ ಸಂಪೂರ್ಣ ಹಾನಿಗೀಡಾಗಿರುವುದನ್ನು ಗಮನಿಸಿದ್ದರು. ಇದರಿಂದ ಮನನೊಂದು ವಿಷ ಸೇವಿಸಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವಾಹದಿಂದಾದ ಹಾನಿಗೆ ಮನನೊಂದು ರೈತ ಆತ್ಮಹತ್ಯೆ
ಕೃಷ್ಣಾ ನದಿ ಪ್ರವಾಹದಲ್ಲಿ ಮನೆ ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಮನ ನೊಂದು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
Vijaya Karnataka 13 Aug 2019, 5:00 am