ಆ್ಯಪ್ನಗರ

ಮಠಾಧೀಶರ ನೇತೃತ್ವದಲ್ಲಿ ಶೀಘ್ರ ಸಾಂಕೇತಿಕ ಧರಣಿ

Vijaya Karnataka 14 Jul 2018, 5:00 am
ಬೆಳಗಾವಿ: ಸರಕಾರಗಳಿಂದ ಉತ್ತರ ಕರ್ನಾಟಕದ ನಿರ್ಲಕ್ಷ್ಯ ಖಂಡಿಸಿ ಶೀಘ್ರ ಈ ಭಾಗದ ನಾನಾ ಮಠಾಧೀಶರ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದ ಮುಂದೆ ಒಂದು ದಿನ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಮುಖಂಡ ಅಶೋಕ ಪೂಜಾರಿ ಹೇಳಿದರು.
Vijaya Karnataka Web BEL-13 LBS 2


ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಧರಣಿಯ ನಂತರ ಮಠಾಧೀಶರ ನೇತೃತ್ವದಲ್ಲಿ ಬೆಂಗಳೂರಿಗೆ ನಿಯೋಗ ತೆರಳಿ ಉತ್ತರ ಕರ್ನಾಟಕಕ್ಕೆ ಇದುವರೆಗೆ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿಗಳಿಗೆ ಹಾಗೂ ವಿರೋಧ ಪಕ್ಷದ ನಾಯಕರ ಗಮನ ಸೆಳೆಯಲು ನಿರ್ಧರಿಸಿದ್ದೇವೆ ಎಂದರು.

ಸಮ್ಮಿಶ್ರ ಸರಕಾರ ಉತ್ತರ ಕರ್ನಾಟಕ ಭಾಗದ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತ್ಯೇಕ ರಾಜ್ಯದ ಕೂಗು ಗಟ್ಟಿಯಾಗಲಿದೆ ಎಂದು ಅವರು ಎಚ್ಚರಿಸಿದರು.

ಮಾರುತಿ ಪೂಜಾರಿ, ಎಂ.ಟಿ.ಪಾಟೀಲ, ರಾಜುಗೌಡ ನಿರ್ವಾಣಿ, ಸಂಜು ಭೋಸ್ಲೆ, ದೀಪಕ ರಾಯಣ್ಣವರ, ಆರ್‌.ಎಸ್‌.ದರ್ಗೆ, ನಿಂಗಪ್ಪ ನಾಯಕ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ