ಆ್ಯಪ್ನಗರ

ಚಿಂಚಲಿ ಪಪಂ ಮುಖ್ಯಾಧಿಕಾರಿ, ಸಿಬ್ಬಂದಿ ಎಸಿಬಿ ಬಲೆಗೆ

ಬೆಳಗಾವಿ: ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ...

Vijaya Karnataka 15 Jul 2020, 5:00 am
ಬೆಳಗಾವಿ: ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಗುತ್ತಿಗೆದಾರನಿಂದ ಲಂಚ ಪಡೆಯುವ ಸಂದರ್ಭದಲ್ಲಿಎಸಿಬಿ ಬಲೆಗೆ ಬಿದಿದ್ದಾರೆ.
Vijaya Karnataka Web acb raid
ಸಾಂದರ್ಭಿಕ


ಚಿಂಚಲಿ ಪಪಂ ಮುಖ್ಯಾಧಿಕಾರಿ ಎಸ್‌.ಜಿ.ಪೂಜೇರಿ ಹಾಗೂ ಎಸ್‌ಡಿಎ ಸಿಬ್ಬಂದಿ ಮಾರುತಿ ನಾಗಪ್ಪ ಗಾಡಿವಡ್ಡರ ಹಾವೇರಿ ಮೂಲದ ಗುತ್ತಿಗೆದಾರ ಜಗದೀಶ ಕಣವಿ ಅವರಿಗೆ ಬಿಲ್‌ ಪಾವತಿಸಲು 25 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಜಗದೀಶ ಕಣವಿ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಲಂಚ ಪಡೆಯುವ ಸಂದರ್ಭದಲ್ಲಿಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಹಣದೊಂದಿಗೆ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿಡಿಎಸ್ಪಿ ಶರಣಪ್ಪ, ಪಿಐ ಎ.ಎಸ್‌. ಗೋಡಿಗೊಪ್ಪ ಹಾಗೂ ಸಿಬ್ಬಂದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ