ಆ್ಯಪ್ನಗರ

ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಮುಗಳಖೋಡದ ವಿದ್ಯಾರ್ಥಿನಿಯರ ಸಾಧನೆ

ಮುಗಳಖೋಡ: ಪಟ್ಟಣದ ಶ್ರೀ ಸಿದ್ದಲಿಂಗೇಶ್ವರ ಶಿಕ್ಷ ಣ ಸಂಸ್ಥೆಯ ಸಿದ್ದರಾಮೇಶ್ವರ ...

Vijaya Karnataka 26 Aug 2019, 5:00 am
ಮುಗಳಖೋಡ: ಪಟ್ಟಣದ ಶ್ರೀ ಸಿದ್ದಲಿಂಗೇಶ್ವರ ಶಿಕ್ಷ ಣ ಸಂಸ್ಥೆಯ ಸಿದ್ದರಾಮೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಉತ್ತರಾಖಂಡದ ಹರಿದ್ವಾರದಲ್ಲಿ ಅ.17 ರಿಂದ 20 ರವರೆಗೆ ನಡೆದ 'ಸ್ಟುಡೆಂಟ್ಸ್‌ ಓಲಂಪಿಕ್ಸ್‌ ಆಫ್‌ ಇಂಡಿಯಾ 2019-20' ರಾಷ್ಟ್ರ ಮಟ್ಟದ ಮಹಿಳಾ ಕಬ್ಬಡಿ ಪಂದ್ಯದಲ್ಲಿ ಚಾಂಪಿಯನ್‌ ಆಗುವ ಮೂಲಕ ಮಲೇಶಿಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ದೇಶ ತಂಡವನ್ನು ಪ್ರತಿನಿಧಿಸಲಿದ್ದಾರೆ.
Vijaya Karnataka Web BLG-2508-2-52-25 MGKD 1


ಪಟ್ಟಣದ ಗಣ್ಯರು ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಅಚಲೇರಿ ಜಿಡಗಾ ಮಠದ ಪೀಠಾಧಿಪತಿ ಶ್ರೀ ಬಸವರಾಜೇಂದ್ರ ಸ್ವಾಮಿಗಳು ವಿದ್ಯಾರ್ಥಿನಿಯರನ್ನು ಸ್ವಾಗತಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯಾಧ್ಯಾಪಕರು, ಶಿಕ್ಷ ಕ ಸಿಬ್ಬಂದಿ, ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ