ಆ್ಯಪ್ನಗರ

ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಬೈಲಹೊಂಗಲ: ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ದೇಶದ್ರೋಹಿ ...

Vijaya Karnataka 18 Feb 2020, 5:00 am
ಬೈಲಹೊಂಗಲ: ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿದೇಶದ್ರೋಹಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ದೇಶಾಭಿಮಾನಿ ಯುವಕರು ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
Vijaya Karnataka Web 17HTP8_53
ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೈಲಹೊಂಗಲದಲ್ಲಿಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.


ಪಟ್ಟಣದ ರಾಯಣ್ಣ ವೃತ್ತದಲ್ಲಿಸೇರಿದ ಯುವಕರು ಪದೇ, ಪದೆ ದೇಶದ್ರೋಹಿ ಘೋಷಣೆ ಕೂಗಿ ಭಾರತೀಯರ ಸ್ವಾಭಿಮಾನ ಕೆಣಕುತ್ತಿರುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕು. ಅಂಥವರನ್ನು ಹುಡುಕಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ವಿಹಿಂಪ ತಾಲೂಕಾಧ್ಯಕ್ಷ ಡಾ.ಚಿದಂಬರ ಕುಲಕರ್ಣಿ, ಬಿಜೆಪಿ ಮಂಡಲ ಅಧ್ಯಕ್ಷ ಮಡಿವಾಳಪ್ಪ ಹೋಟಿ, ರಾಯಣ್ಣ ಸಮಿತಿ ಅಧ್ಯಕ್ಷ ರಾಜು ಸೊಗಲ, ಉಪಾಧ್ಯಕ್ಷ ಸೋಮನಾಥ ಸೊಪ್ಪಿಮಠ, ಶಿವಾನಂದ ಬಡ್ಡಿಮನಿ, ಸೋಮೇಶ್ವರ ಸಕ್ಕರೆ ಕಾರ್ಖಾನೆ ನಿರ್ದೇಶಕ ರಾಜು ಕುಡಸೋಮಣ್ಣವರ, ಮಹಾಂತೇಶ ಹೊಸಮನಿ, ಅಮಿತ ಕುಲಕರ್ಣಿ, ಮುರಗೇಶ ಗುಂಡ್ಲೂರ, ವಿಶಾಲ ಹೊಸೂರ, ಆನಂದ ಮೂಗಿ, ಶ್ರೀಶೈಲ ಅಂದಾನಿ, ಅಶೋಕ ಸವದತ್ತಿ, ವಿವೇಕಾನಂದ ಪೂಜಾರ, ಅಶೋಕ ಬೋರಕನವರ, ಚನ್ನಪ್ಪ ಬೋರಕನವರ, ಮಲ್ಲಿಕಾರ್ಜುನ ಏಣಗಿಮಠ, ಸಂತೋಷ ಕಿತ್ತೂರ, ಚಂದ್ರಶೇಖರ ಭಾವಿಮನಿ, ಮಹಾಂತೇಶ ದೊಡ್ಲಿ, ಶ್ರೀಕಾಂತ ಶಿರಹಟ್ಟಿ, ರಾಜು ಬಡಿಗೇರ, ಅಶೋಕ ಜವಳಿ ಹಾಗೂ ಅನೇಕರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ