ಆ್ಯಪ್ನಗರ

ಆಯುಕ್ತರ ವರ್ತನೆ ಬಗ್ಗೆ ಸಿಎಂ, ಗೃಹ ಸಚಿವರೊಂದಿಗೆ ಚರ್ಚಿಸಿ ಕ್ರಮ: ರಮೇಶ

ಬೆಳಗಾವಿ: ತಾಲೂಕಿನ ...

Vijaya Karnataka 29 Aug 2018, 5:00 am
ಬೆಳಗಾವಿ: ತಾಲೂಕಿನ ಕುದರೆಮನಿ ಗ್ರಾಮದಲ್ಲಿ ಈಚೆಗೆ ಜೂಜಾಟದ ಅಡ್ಡೆ ಮೇಲೆ ನಡೆದ ದಾಳಿ ಹಾಗೂ ಆನಂತರ ಪೊಲೀಸ್‌ ಇಲಾಖೆ ಕೈಗೊಂಡ ಕಾಕತಿ ಠಾಣೆ ಪಿಐ ಅಮಾನತು ಕ್ರಮ ರಾಜಕೀಯವಾಗಿಯೂ ಸದ್ದು ಮಾಡುತ್ತಿದ್ದು, ನಗರ ಪೊಲೀಸ್‌ ಆಯುಕ್ತ ಡಾ. ಡಿ.ಸಿ. ರಾಜಪ್ಪ ಅವರ ಕುರ್ಚಿಯೇ ಅಲುಗಾಡುತ್ತಿದೆ.
Vijaya Karnataka Web action discussing with cm and home minister about conduct of commissioner
ಆಯುಕ್ತರ ವರ್ತನೆ ಬಗ್ಗೆ ಸಿಎಂ, ಗೃಹ ಸಚಿವರೊಂದಿಗೆ ಚರ್ಚಿಸಿ ಕ್ರಮ: ರಮೇಶ


ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರದ ಕಾನೂನು ಸುವ್ಯವಸ್ಥೆ ಹಾಗೂ ಅಧಿಕಾರಿಗಳ ವರ್ತನೆ ಕುರಿತು ಗೃಹ ಸಚಿವರ ಗಮನಕ್ಕೆ ತರುವುದಾಗಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರೆ, ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಗರ ಪೊಲೀಸ್‌ ಆಯುಕ್ತರ ವರ್ತನೆ ಕುರಿತು ಗರಂ ಆಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಶಾಸಕ ಸತೀಶ ಜಾರಕಿಹೊಳಿ, ''ಜೂಜಾಟದ ಅಡ್ಡೆ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಕಾಕತಿ ಪೊಲೀಸ್‌ ಠಾಣೆ ನಿರೀಕ್ಷಕ ರಮೇಶ ಗೋಕಾಕ್‌ ಅವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಏಳೆಂಟು ಅಧಿಕಾರಿಗಳು ಭಾಗಿಯಾಗಿದ್ದರೂ ರಮೇಶ ಅವರೊಬ್ಬರನ್ನೇ ಅಮಾನತು ಮಾಡಿರುವುದು ಸರಿಯಾದ ಕ್ರಮವಲ್ಲ'', ಎಂದು ಕಿಡಿಕಾರಿದರು.

ಸಂಜೆ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ''ನಡೆದ ಕುದರೆಮನಿ ಜೂಜಾಟದ ಅಡ್ಡೆ ಮೇಲಿನ ದಾಳಿ ಕುರಿತು ನನಗೆ ಪೂರ್ಣ ಮಾಹಿತಿ ಇಲ್ಲ. ಆದರೆ, ಪೊಲೀಸ್‌ ಕಮಿಷನರ್‌ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಇದು ಉತ್ತಮ ಬೆಳವಣಿಗೆಯಲ್ಲ'', ಎಂದರು. ಅವರ ವರ್ತನೆ ವಿಷಯವಾಗಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಇಷ್ಟರಲ್ಲೇ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ನಗರದ ಹಿತ ದೃಷ್ಟಿಯಿಂದ ಕಮಿಷನರ್‌ ರಾಜಪ್ಪ ಅವರಿಗೆ ಫ್ರೀ ಹ್ಯಾಂಡ್‌ ಕೊಡಲಾಗಿದೆ. ಆದರೆ, ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಜತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
- ರಮೇಶ ಜಾರಕಿಹೊಳಿ, ಸಚಿವ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ