ಆ್ಯಪ್ನಗರ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರ ಮುಗಿಸಲು ಕ್ರಮ

ಅಥಣಿ: ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಆದಷ್ಟು ...

Vijaya Karnataka 17 Sep 2019, 5:00 am
ಅಥಣಿ: ಬಸವೇಶ್ವರ ಏತ ನೀರಾವರಿ ಯೋಜನೆಯನ್ನು ಆದಷ್ಟು ಶೀಘ್ರ ಮುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷತ್ರ್ಮಣ ಸವದಿ ಹೇಳಿದರು.
Vijaya Karnataka Web 16 ATHANI-03_53


ಅವರು ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದ ಕಾಡಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿಭಾಗವಹಿಸಿ ಮಾತನಾಡಿದರು. ಅಥಣಿ ಉತ್ತರ ಭಾಗದ ಅಗ್ರಾಣಿ ನದಿಗೆ ಮಹಾರಾಷ್ಟ್ರದಿಂದ ನೀರು ಹರಿಸಲು ಅಲ್ಲಿನ ಸರಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಮಾತನಾಡಿ, ಸರಕಾರ ಮಾಡಲಾಗದ್ದನ್ನು ಸಹಕಾರ ರಂಗ ಮಾಡಲು ಸಾಧ್ಯ ಎಂದರು.

ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್‌ ಜೊಲ್ಲೆಮಾತನಾಡಿ, ರಾಜ್ಯದಲ್ಲೇ ಬೆಳಗಾವಿ ಜಿಲ್ಲೆಯಲ್ಲಿಸಹಕಾರ ರಂಗ ಅತ್ಯಂತ ಶಕ್ತಿಯುತವಾಗಿದ್ದು ಗ್ರಾಮಗಳಿಂದ ಮಹಾನಗರಗಳವರೆಗೆ ಅನೇಕ ಸಹಕಾರಿ ಸಂಸ್ಥೆಗಳು ಅತ್ಯುತ್ತಮ ಕಾರ್ಯಗೈದಿವೆ ಎಂದರು.

ಕೊಣ್ಣೂರಿನ ಮರಡಿ ಮಠದ ಪವಾಡಸಿದ್ದೇಶ್ವರ ಸ್ವಾಮೀಜಿ, ಇಂಚಗೇರಿ ಮಠದ ಸಮರ್ಥ ರೇವಣಸಿದ್ದೇಶ್ವರ ಮಹಾರಾಜರು, ಕೌಲಗುಡ್ಡದ ಸಿದ್ಧಾಶ್ರಮದ ಅಮರೇಶ್ವರ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ, ನಿರ್ದೇಶಕರಾದ ಘೂಳಪ್ಪ ಜತ್ತಿ, ಸಿದ್ದಗೌಡ ಪಾಟೀಲ, ನಿಂಗಪ್ಪ ಕೋಕಲೆ, ಸಂಗನಗೌಡ ಪಾಟೀಲ ಸೇರಿದಂತೆ ಗುಂಡೇವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ