ಬೆಳಗಾವಿ: ದೀಪಾವಳಿಗೆ ಅ. 26, 27, 29 ರಂದು ಸಾರ್ವತ್ರಿಕ ರಜೆಗಳು ಬಂದಿರುವ ಹಿನ್ನೆಲೆಯಲ್ಲಿವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದಿಂದ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಬೆಂಗಳೂರು, ಮುಂಬೈ, ಪುಣೆ ಹಾಗೂ ಪಣಜಿಯಿಂದ ಬೆಳಗಾವಿ ವಿಭಾಗದ ಸ್ಥಳಗಳಿಗೆ ಬರುವ ಪ್ರಯಾಣಿಕರಿಗಾಗಿ ಅ.25, 26ರಂದು ಬೆಂಗಳೂರು ಕೇಂಪೆಗೌಡ ಬಸ್ ನಿಲ್ದಾಣ, ಮುಂಬೈ , ಪುಣೆ ಮತ್ತು ಪಣಜಿಯಿಂದ ಹೆಚ್ಚಿನ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಹಬ್ಬದ ನಂತರ ಮರಳಿ ಬೆಂಗಳೂರು, ಪಣಜಿ, ಪುಣೆ, ಮುಂಬೈಗೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಅ. 29ರಂದು ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು ಎಂದು ಬೆಳಗಾವಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.
ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ
ಬೆಳಗಾವಿ: ದೀಪಾವಳಿಗೆ ...
Vijaya Karnataka 18 Oct 2019, 5:00 am