ಆ್ಯಪ್ನಗರ

ಮೊಬೈಲ್‌ ಸಂದೇಶದಲ್ಲಿ ಕೃಷಿ ಚಟುವಟಿಕೆ ಮಾಹಿತಿ

ಬೆಳಗಾವಿ : ಕೃಷಿ ವಿಜ್ಞಾನ ಕೇಂದ್ರವು ಜಿಲ್ಲೆಯ 35 ಸಾವಿರ ರೈತರ ಸಂಪರ್ಕದಲ್ಲಿದ್ದು, ಕೃಷಿ ಚಟುವಟಿಕೆಗಳ ಅನುಸಾರವಾಗಿ ಕಾಲಕಾಲಕ್ಕೆ ಅವರಿಗೆ ಮೊಬೈಲ್‌ ...

Vijaya Karnataka 21 Jun 2019, 10:59 pm
Vijaya Karnataka Web BEL-20 LBS 10
ಬೆಳಗಾವಿ: ಕೃಷಿ ವಿಜ್ಞಾನ ಕೇಂದ್ರವು ಜಿಲ್ಲೆಯ 35 ಸಾವಿರ ರೈತರ ಸಂಪರ್ಕದಲ್ಲಿದ್ದು, ಕೃಷಿ ಚಟುವಟಿಕೆಗಳ ಅನುಸಾರವಾಗಿ ಕಾಲಕಾಲಕ್ಕೆ ಅವರಿಗೆ ಮೊಬೈಲ್‌ ಸಂದೇಶಗಳನ್ನು ಕಳುಹಿಸುತ್ತಿದೆ. ವಿಡಿಯೋಗಳ ಮೂಲಕ ತಂತ್ರಜ್ಞಾನಗಳ ಮಾಹಿತಿ ನೀಡಲಾಗುತ್ತಿದೆ ಎಂದು ಮತ್ತಿಕೊಪ್ಪ ಕೃಷಿ ಕೇಂದ್ರದ ಕಾರ್ಯಾಧ್ಯಕ್ಷ ಬಿ.ಆರ್‌. ಪಾಟೀಲ ಹೇಳಿದರು.

ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದ ಐಸಿಎಆರ್‌- ಕೆಎಲ್‌ಇ ಸಂಸ್ಥೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ 5ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಕೇಂದ್ರ ತಲುಪುತ್ತಿದೆ. ಅವರಿಗೆ ಆದಾಯ ಹೆಚ್ಚಿಸುವ ತಂತ್ರಜ್ಞಾನಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೇಂದ್ರವು ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಕೇಂದ್ರದ ಸಲಹೆಗಾರ ಡಾ. ವಿ.ಎಸ್‌. ಕೋರಿಕಂಥಿಮಠ ಮಾತನಾಡಿ, ಕೇಂದ್ರವು ಜಮೀನುಗಳಲ್ಲಿ ಅನೇಕ ಪರೀಕ್ಷೆಗಳನ್ನು ಹಮ್ಮಿಕೊಂಡು ರೈತರಿಗೆ ನೂತನವಾದ ತಂತ್ರಜ್ಞಾನಗಳನ್ನು ತಲುಪಿಸುತ್ತಿದೆ. ಕೇಂದ್ರದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲಯ, ಸಸ್ಯ ಆರೋಗ್ಯ ಚಿಕಿತ್ಸಾಲಯ, ಬೀಜ ಸಂಸ್ಕರಣಾ ಘಟಕಗಳನ್ನು ಹೊಂದಿದೆ ಎಂದರು.

ಕೇಂದ್ರದಿಂದ ರೂಪಿಸಲಾದ ವಿವಿಧ ಬೆಳೆಗಳ ತಂತ್ರಜ್ಞಾನ ಮಾಹಿತಿ ಇರುವ ಹತ್ತು ಹಸ್ತ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಎಚ್‌.ವೆಂಕಟೇಶ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ವೈ.ಕೆ.ಕೋಟಿಕಲ, ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ. ಬಿ.ಜಿ.ಶಿವಕುಮಾರ, ಕೃಷಿ ವಿಜ್ಞಾನ ಕೇಂದ್ರಗಳ ನೋಡಲ್‌ ಅಧಿಕಾರಿ ಡಾ. ಶ್ರೀಪಾದ ಕುಲಕರ್ಣಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ