ಆ್ಯಪ್ನಗರ

ಇಂದಿನಿಂದ ಕೃಷಿ ಮಾಹಿತಿ ಅಭಿಯಾನ

ತಾಲೂಕಿನ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇ 24ರಿಂದ 31ರವರೆಗೆ ವಿವಿಧ ಹೋಬಳಿಗಳಲ್ಲಿ 'ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ' ಕೃಷಿ ಅಭಿಯಾನ ...

Vijaya Karnataka 24 May 2019, 5:00 am
ಸವದತ್ತಿ: ತಾಲೂಕಿನ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇ 24ರಿಂದ 31ರವರೆಗೆ ವಿವಿಧ ಹೋಬಳಿಗಳಲ್ಲಿ 'ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ' ಕೃಷಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಸಮಗ್ರ ಕೃಷಿ ಮಾಹಿತಿ ಮತ್ತು ಕೃಷಿ ವಸ್ತು ಪ್ರದರ್ಶನ ಹಾಗೂ ರೈತ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
Vijaya Karnataka Web agriculture information drive starts from today
ಇಂದಿನಿಂದ ಕೃಷಿ ಮಾಹಿತಿ ಅಭಿಯಾನ


24 ಮತ್ತು 25 ಸವದತ್ತಿ ಹೋಬಳಿಯಲ್ಲಿ, 26 ಮತ್ತು 27ರಂದು ಯರಗಟ್ಟಿ ಹೋಬಳಿಯಲ್ಲಿ, 28 ಮತ್ತು 29ರಂದು ಮುರಗೋಡ ಹೋಬಳಿಯಲ್ಲಿ, 30 ಮತ್ತು 31ರಂದು ಮುನವಳ್ಳಿ ಹೋಬಳಿಗಳಲ್ಲಿ ಅಭಿಯಾನ ನಡೆಯಲಿದೆ.

ಕೃಷಿ ಇಲಾಖೆಯು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವಶ್ಯವಿರುವ ತಂತ್ರಜ್ಞಾನವನ್ನು ತಲುಪಿಸಲು, ಏಕಗವಾಕ್ಷಿ ವಿಸ್ತರಣಾ ಪದ್ಧತಿಯಲ್ಲಿ ಕೃಷಿ ಮಾಹಿತಿಯನ್ನು ಸಮೂಹ ಜಾಗೃತಿ ಕಾರ್ಯಕ್ರಮವಾದ ಕೃಷಿ ಅಭಿಯಾನದ ಮೂಲಕ ತಲುಪಿಸುವ ಪ್ರಯತ್ನ ನಡೆಸಲಾಗುತ್ತಿದೆ.

ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ಉತ್ಪಾದಕತೆ ಹೆಚ್ಚಿಸುವ ತಾಂತ್ರಿಕತೆ ಮನವರಿಕೆ ಮಾಡುವುದು ಅಭಿಯಾನದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ವಿಜ್ಞಾನಿಗಳೊಂದಿಗೆ ರೈತರ ಸಂವಾದ ನಡೆಯಲಿದೆ. ತಾಲೂಕಿನ ಎಲ್ಲ ಹೋಬಳಿಗಳಲ್ಲಿ ವಿಜ್ಞಾನಿಗಳು ಹಾಗೂ ಅಧಿಕಾರಿಗಳನ್ನು ಒಳಗೊಂಡ ತಂಡಗಳು ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಎರಡು ದಿನಗಳ ಕಾಲ ಜಾಗೃತಿ ಮೂಡಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ