ಆ್ಯಪ್ನಗರ

ಬೆಳಗಾವಿಯಲ್ಲಿ ಪ್ರವಾಹ ಸ್ಥಿತಿ: ಸಂಕೇಶ್ವರದಲ್ಲಿ ಅವಳಿ ಮಕ್ಕಳೊಂದಿಗೆ ಬಾಣಂತಿ ರಕ್ಷಣೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka Web 8 Aug 2019, 11:55 am
ಬೆಳಗಾವಿ: ಗಡಿ ಜಿಲ್ಲೆಯಲ್ಲಿ ಭೀಕರ ಮಳೆ ಸುರಿಯುತ್ತಿದ್ದು, ಸಂಕೇಶ್ವರ ಪಟ್ಟಣ ಸಂಪೂರ್ಣ ಜಲಾವೃತವಾಗಿದೆ. ಪಟ್ಟಣದ ರಸ್ತೆಗಳೆಲ್ಲ ನದಿಯಂತಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
Vijaya Karnataka Web sankeshwar


ಏತನ್ಮಧ್ಯೆ, ಪಟ್ಟಣದ ಹೆದ್ದೂರ ಗಲ್ಲಿಯ ಮಿರ್ಜಿ ಕುಟುಂಬ ಸಹಿತ ಅವಳಿ ಜವಳಿ ಮಕ್ಕಳೊಂದಿಗೆ ಬಾಣಂತಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಯಿತು.

ಬೋಟ್ ಕೂಡ ಕೊಟ್ಟಿಲ್ಲ, ಇದೆಂಥ ಕಾರ್ಯಾಚರಣೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಕೇಶ್ವರದಲ್ಲಿ ಬಿಜೆಪಿಗೆ 16 ಸಾವಿರ ಲೀಡ್ ಕೊಟ್ಟಿದ್ದೇವು. ಭಾನುವಾರದಿಂದ 1 ಸಾವಿರ ಮನೆಗಳು ನೀರಲ್ಲಿ ನಿಂತಿದ್ದರೂ ಇಂದಿಗೂ ಯಾರೊಬ್ಬರೂ ಭೀಟಿ ನೀಡಿ ಸಮಾಧಾನ ಮಾಡಿಲ್ಲ. 1983 ರಲ್ಲಿ ಈ ಪರಿಸ್ಥಿತಿ ಬಂದಿತ್ತು. ಇಂತಹ ಪರಿಸ್ಥಿಯಿದ್ದರೂ ಜನರ ಅನುಕೂಲಕ್ಕೆ ಕೊನೆ ಪಕ್ಷ ಬೋಟ್ ಕೂಡ ನೀಡಿಲ್ಲ. ಇಲ್ಲಿನ ಯುವಕ ಸಂಘದವರು ಟೈರ್ ಟ್ಯೂಬ ಸಹಾದಿಂದ ಜನರನ್ನು ಸಾಗಿಸುತ್ತಿದ್ದಾರೆ ಎಂದು ತರಕಾರಿ ವ್ಯಾಪಾರಿ ಶಾಹಬುದ್ದೀನ್ ತೇರಣಿ ಎಂಬವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಹಳ್ಳ ದಾಟುವಾಗ ಕೊಚ್ಚಿ ಹೋದ ಬಾಲಕಿ

ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಹಳ್ಳ ದಾಟುವಾಗ ಬಾಲಕಿ ಕೊಚ್ಚಿ ಹೋದ ಘಟನೆ ಗುರುವಾರ ಚಿಕ್ಕೋಡಿ ತಾಲೂಕಿನ ನಾಗರ ಮುನ್ನೋಳ್ಳಿ ಗ್ರಾಮದಲ್ಲಿ ಜರುಗಿದೆ.

ಬೆಳಗಾವಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೆರೆಯಿಂದ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಸಿಎಂ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ