ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರ ಹುದ್ದೆಗೆ ಹಿರಿಯ ಐಎಎಸ್ ಅಧಿಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಕ ಮಾಡಿ ಸರಕಾರ ಶುಕ್ರವಾರ ವರ್ಗಾವಣೆ ಆದೇಶ ಹೊರಡಿಸಿದೆ. ಇವರಿಗೆ ಬಾಗಲಕೋಟ ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಮತ್ತು ಪುನರ್ನಿರ್ಮಾಣ ಆಯುಕ್ತರ ಹುದ್ದೆಯ ಹೊಣೆಯನ್ನೂ ವಹಿಸಲಾಗಿದೆ. ಪ್ರಾದೇಶಿಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎ. ಮೇಘಣ್ಣವರ್ ಸೇವಾ ನಿವೃತ್ತಿ ಹೊಂದಿದ ಬಳಿಕ ಧಾರವಾಡ ಜಿಲ್ಲಾಧಿಧಿಕಾರಿ ದೀಪಾ ಚೋಳನ್ ಹುದ್ದೆಯ ಪ್ರಭಾರ ನೋಡಿಕೊಳ್ಳುತ್ತಿದ್ದರು. ಈಗ ಸರಕಾರ ಕಾಯಂ ಆಯುಕ್ತರ ನೇಮಕ ಮಾಡಿದೆ.
ಅಮ್ಲನ್ ಬಿಸ್ವಾಸ್ ಪ್ರಾದೇಶಿಕ ಆಯುಕ್ತ
ಬೆಳಗಾವಿ ಪ್ರಾದೇಶಿಕ ಆಯುಕ್ತರ ಹುದ್ದೆಗೆ ಹಿರಿಯ ಐಎಎಸ್ ಅಧಿಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್ ...
Vijaya Karnataka 7 Sep 2019, 5:00 am