ಆ್ಯಪ್ನಗರ

ಚಳಿಗಾಲದ ಅಧಿವೇಶನ ವೇಳೆ ಅನಿರ್ದಿಷ್ಟ ಧರಣಿ

ಬೆಳಗಾವಿ: ಉತ್ತರ ಕರ್ನಾಟಕದ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಈಚೆಗೆ ಸುವರ್ಣ ವಿಧಾನಸೌಧದ ಎದುರು ಮಠಾಧೀಶರ ನೇತೃತ್ವದಲ್ಲಿ ನಡೆದ ಪಕ್ಷಾತೀತ ಪ್ರತಿಭಟನೆ ...

Vijaya Karnataka 31 Oct 2018, 5:00 am
ಬೆಳಗಾವಿ : ಉತ್ತರ ಕರ್ನಾಟಕದ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಈಚೆಗೆ ಸುವರ್ಣ ವಿಧಾನಸೌಧದ ಎದುರು ಮಠಾಧೀಶರ ನೇತೃತ್ವದಲ್ಲಿ ನಡೆದ ಪಕ್ಷಾತೀತ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೀಡಿದ ಭರವಸೆಗಳ ಕುರಿತಾಗಿ ಮೂರು ತಿಂಗಳು ಕಳೆದರೂ ಯಾವುದೇ ಬೆಳವಣಿಗೆ ನಡೆದಿಲ್ಲ. ಇದು ಸರಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಕಿಡಿಕಾರಿದ್ದಾರೆ.
Vijaya Karnataka Web an indefinite strike during the winter session
ಚಳಿಗಾಲದ ಅಧಿವೇಶನ ವೇಳೆ ಅನಿರ್ದಿಷ್ಟ ಧರಣಿ


ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಮುಗಿದ ತಕ್ಷ ಣ ರಾಜ್ಯ ಸರಕಾರ ಉತ್ತರ ಕರ್ನಾಟಕದ ಬಗ್ಗೆ ಗಮನ ಹರಿಸಬೇಕು. ಇಲ್ಲದಿದ್ದರೆ ಸರಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಹಾಗೂ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಮಠಾಧೀಶರ ನೇತೃತ್ವದಲ್ಲಿ ಮತ್ತೊಮ್ಮೆ ಅನಿರ್ದಿಷ್ಟ ಧರಣಿ ನಡೆಸಲಾಗುವುದು. ಧರಣಿ ಸತ್ಯಾಗ್ರಹ ರೂಪುರೇಷೆ ಮತ್ತು ಸಿದ್ಧತೆಗಳ ಬಗ್ಗೆ ಚರ್ಚಿಸಲು ಶೀಘ್ರ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಉತ್ತರ ಕರ್ನಾಟಕದ ಪರ ಸಂಘಟನೆಗಳ ಸಭೆ ಕರೆಯಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ