ಆ್ಯಪ್ನಗರ

ಅಣ್ಣಾಸಾಹೇಬ ಜೊಲ್ಲೆ ಅಧ್ಯಕ್ಷ, ಬಸಪ್ಪ ತೇಲಿ ಉಪಾಧ್ಯಕ್ಷ

ಚಿಕ್ಕೋಡಿ : ಹುಬ್ಬಳ್ಳಿಯ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟದ ...

Vijaya Karnataka 7 Jun 2019, 5:00 am
ಚಿಕ್ಕೋಡಿ : ಹುಬ್ಬಳ್ಳಿಯ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟದ ಕಾರ್ಯಾಲಯದಲ್ಲಿ ಸಂಘದ ಮುಂದಿನ ಐದು ವರ್ಷಗಳ ಅವಧಿಗಾಗಿ ಈಚೆಗೆ ಜರುಗಿದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅಧ್ಯಕ್ಷ ರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ರಾಗಿ ಬಸಪ್ಪ ಕೆ. ತೇಲಿ ಅವಿರೋಧ ಆಯ್ಕೆಯಾಗಿದ್ದಾರೆ.
Vijaya Karnataka Web BEL-6CKD4


ನೂತನ ಅಧ್ಯಕ್ಷ , ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಂಘದ ನಿರ್ದೇಶಕರಾದ ಬಿ.ಟಿ. ಬೆನಕಟ್ಟಿ, ಸುಧಾಕರ ತಿಮ್ಮಣ್ಣವರ, ಮಲ್ಲಿಕಾರ್ಜುನ ಅಕ್ಕಿ, ದಯಾನಂದ ಅಲಗೊಂಡ, ಎಸ್‌.ಬಿ. ಪಾಟೀಲ, ಜಗದೀಶ ತಂಬಾಕದ, ಟಿ.ಎಸ್‌. ಪಾಟೀಲ, ಮಲ್ಲಿಕಾರ್ಜುನಗೌಡ ಪಾಟೀಲ, ಜಿ.ಸಿ. ರೆಡ್ಡಿಯವರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ರನ್ನು ಸನ್ಮಾನಿಸಿದರು. ಚುನಾವಣಾಧಿಕಾರಿಗಳಾಗಿ ಪಿ.ಎನ್‌.ಪಾಟೀಲ ಕಾರ್ಯ ನಿರ್ವಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ