ರಾಯಬಾಗ : ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಸಂಚರಿಸಿ ಮತದಾರರಲ್ಲಿ ಮತ ಯಾಚಿಸಿದರು.
ಶಾಸಕ ಡಿ.ಎಂ. ಐಹೊಳೆ ಮಾತನಾಡಿ ಕಾಂಗ್ರೆಸ್ ಸರಕಾರ 60 ವರ್ಷಗಳಲ್ಲಿ ಮಾಡಲಾಗದ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಐದು ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ. ದೇಶದ ಉಜ್ವಲ ಭವಿಷ್ಯಕ್ಕಾಗಿ ಮತದಾರರು ಬಿಜೆಪಿ ಬೆಂಬಲಿಸಬೇಕೆಂದು ಮನವಿ ಮಾಡಿದರು.
ಮಾಜಿ ಸಂಸದ ಅಮರಸಿಂಹ ಪಾಟೀಲ ಮಾತನಾಡಿ, ನರೇಂದ್ರ ಮೋದಿಯವರು ಮತ್ತೊಂದು ಬಾರಿ ಪ್ರಧಾನಿಯಾದರೆ ನಮ್ಮ ದೇಶ ಇನ್ನಷ್ಟು ಪ್ರಗತಿ ಹೊಂದಿ ಅಭಿವೃದ್ಧಿಯಲ್ಲಿ ನೆರೆಯ ರಾಷ್ಟ್ರಗಳಿಗೆ ಸವಾಲಾಗಿ ನಿಲ್ಲುವಲ್ಲಿ ಯಾವುದೇ ಸಂದೇಹವಿಲ್ಲ. ಕಾರಣ ಬಿಜೆಪಿಗೆ ತಮ್ಮ ಮತ ನೀಡಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಕೋರಿದರು.
ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರು, ರಸ್ತೆ, ಆರೋಗ್ಯ, ಶಿಕ್ಷ ಣ ಹಾಗೂ ನಿರುದ್ಯೋಗ ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳಿದರು.
ರೋಡ್ ಶೋದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಲ್.ಬಿ.ಚೌಗುಲೆ, ಮಲ್ಲಪ್ಪ ಕಮತೆ, ಸಂಗಪ್ಪ ದತ್ತವಾಡೆ, ರಾಜು ದೇಶಪಾಂಡೆ, ಅಣ್ಣಾಸಾಹೇಬ ಕುಲಗುಡೆ, ಸುರೇಶ ಮಾಳಿ, ವಿಶಾಲ ಹೊನಕುಪ್ಪೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಶಾಸಕ ಡಿ.ಎಂ. ಐಹೊಳೆ ಮಾತನಾಡಿ ಕಾಂಗ್ರೆಸ್ ಸರಕಾರ 60 ವರ್ಷಗಳಲ್ಲಿ ಮಾಡಲಾಗದ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಐದು ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ. ದೇಶದ ಉಜ್ವಲ ಭವಿಷ್ಯಕ್ಕಾಗಿ ಮತದಾರರು ಬಿಜೆಪಿ ಬೆಂಬಲಿಸಬೇಕೆಂದು ಮನವಿ ಮಾಡಿದರು.
ಮಾಜಿ ಸಂಸದ ಅಮರಸಿಂಹ ಪಾಟೀಲ ಮಾತನಾಡಿ, ನರೇಂದ್ರ ಮೋದಿಯವರು ಮತ್ತೊಂದು ಬಾರಿ ಪ್ರಧಾನಿಯಾದರೆ ನಮ್ಮ ದೇಶ ಇನ್ನಷ್ಟು ಪ್ರಗತಿ ಹೊಂದಿ ಅಭಿವೃದ್ಧಿಯಲ್ಲಿ ನೆರೆಯ ರಾಷ್ಟ್ರಗಳಿಗೆ ಸವಾಲಾಗಿ ನಿಲ್ಲುವಲ್ಲಿ ಯಾವುದೇ ಸಂದೇಹವಿಲ್ಲ. ಕಾರಣ ಬಿಜೆಪಿಗೆ ತಮ್ಮ ಮತ ನೀಡಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಕೋರಿದರು.
ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರು, ರಸ್ತೆ, ಆರೋಗ್ಯ, ಶಿಕ್ಷ ಣ ಹಾಗೂ ನಿರುದ್ಯೋಗ ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳಿದರು.
ರೋಡ್ ಶೋದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಲ್.ಬಿ.ಚೌಗುಲೆ, ಮಲ್ಲಪ್ಪ ಕಮತೆ, ಸಂಗಪ್ಪ ದತ್ತವಾಡೆ, ರಾಜು ದೇಶಪಾಂಡೆ, ಅಣ್ಣಾಸಾಹೇಬ ಕುಲಗುಡೆ, ಸುರೇಶ ಮಾಳಿ, ವಿಶಾಲ ಹೊನಕುಪ್ಪೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.