ಆ್ಯಪ್ನಗರ

ಗ್ರಾಪಂ ಮಟ್ಟದಲ್ಲಿ ಕೃಷಿ ಸಹಾಯಕರನ್ನು ನೇಮಿಸಿ

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಸಹಾಯಕ ಹುದ್ದೆ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ಡಿಪ್ಲೊಮಾ ಕೃಷಿ ಪದವೀಧರರ ಸಂಘದ ಸದಸ್ಯರು ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟಿಸಿದರು.

Vijaya Karnataka 15 Dec 2018, 5:00 am
ಬೆಳಗಾವಿ: ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಸಹಾಯಕ ಹುದ್ದೆ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ಡಿಪ್ಲೊಮಾ ಕೃಷಿ ಪದವೀಧರರ ಸಂಘದ ಸದಸ್ಯರು ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟಿಸಿದರು.
Vijaya Karnataka Web BEL-14 LBS 2


ಗ್ರಾಮ ಮಟ್ಟದಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆಗಳನ್ನು ರೈತರಿಗೆ ಸಕಾಲಕ್ಕೆ ತಲುಪಿಸುವಲ್ಲಿ ಕೃಷಿ ಸಹಾಯಕರು ಪ್ರಮುಖ ಪಾತ್ರ ವಹಿಸುತ್ತಾರೆ. ಕೃಷಿ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇದರಿಂದ ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯ ನೀಡುವಲ್ಲಿ ಸಾಧ್ಯವಾಗುತ್ತಿಲ್ಲ. ಇಲಾಖೆಯಲ್ಲಿ ನೇಮಕಾತಿ ನಡೆಯದೇ ಇರುವುದರಿಂದ ಕೃಷಿ ಡಿಪ್ಲೊಮಾ ಓದಿದವರು ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೃಷಿ ಡಿಪ್ಲೊಮಾ ಪದವೀಧರರ ಹಿತ ಕಾಪಾಡಲು ಹಾಗೂ ಕೃಷಿ ಗುಣಮಟ್ಟ ಹೆಚ್ಚಿಸಲು ಸರಕಾರ ಮುಂದಾಗಬೇಕು. ಕೃಷಿ ಇಲಾಖೆಯಲ್ಲಿ ಕೃಷಿ ಸಹಾಯಕ ಹುದ್ದೆಗೆ ನೇಮಕಾತಿ ನಡೆಸುವುದು. ಡಿಪ್ಲೊಮಾ ಕೃಷಿ ಪದವೀಧರರಿಗೆ ಬಿಎಸ್ಸಿ ಪದವಿಗೆ ಪ್ರವೇಶ ಪಡೆಯಲು ಇರುವ ಮೀಸಲಾತಿಯನ್ನು ಶೇ.25ಕ್ಕೆ ಏರಿಕೆ ಮಾಡಬೇಕು. ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಡಿಪ್ಲೊಮಾ ಕೃಷಿ ಪದವಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಮಹಾಂತೇಶ ಕುಂಟೋಜಿ, ಶಿವಕುಮಾರ ಯಾದವ, ಯೋಗೇಶ ಎಸ್‌., ಮಂಜುನಾಥ ಬುದ್ನಿ, ರೇಷ್ಮಾ ಎ., ವೆಂಕಟೇಶ ದಾಸರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ