ಆ್ಯಪ್ನಗರ

ಸಾವಿಗೆ ಕತೆ ಕಟ್ಟಿದವರ ಬಂಧನ

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ...

Vijaya Karnataka 27 May 2019, 5:00 am
ಬೆಳಗಾವಿ : ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 'ಗೋರಕ್ಷಕ ಹತ್ಯೆ' ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ ಇಬ್ಬರನ್ನು ಬೆಳಗಾವಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
Vijaya Karnataka Web BLG-2605-2-52-26PRAMOD2


ಈ ಕುರಿತು ಫೇಸ್‌ಬುಕ್‌ನಲ್ಲಿ ಸುಳ್ಳು ಸುದ್ದಿ ಪೋಸ್ಟ್‌ ಮಾಡಿದ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಅರ್ಜುನ್‌ ಮುತ್ತಪ್ಪಾ ಬಸರಗಿ (31), ವಾಟ್ಸ್‌ಆ್ಯಪ್‌ನಲ್ಲಿ ಸುದ್ದಿ ಹಂಚಿಕೊಂಡಿರುವ ಸವದತ್ತಿ ತಾಲೂಕಿನ ಹಿರೇಕುಂಬಿ ಗ್ರಾಮದ ಫಕೀರಪ್ಪ ರಮೇಶ ತಳವಾರ (28) ಬಂಧಿತರು. ಇವರಿಬ್ಬರ ಮೇಲೆ ಗೋಕಾಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಇತರರ ಮೇಲೂ ಕೇಸ್‌ ದಾಖಲಿಸಲಾಗುತ್ತಿದೆ ಎಂದು ಎಸ್‌ಪಿ ಸುಧೀರ್‌ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಆತ್ಮಹತ್ಯೆ ಎಂದ ಪಾಲಕರು: ಶಿವಕುಮಾರ ತಾನಾಗಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನನ್ನು ಕೊಲೆ ಮಾಡಿರುವ ಬಗ್ಗೆ ತಮಗೆ ಯಾರ ಮೇಲೂ ಸಂಶಯ ಇಲ್ಲ ಎಂದು ಶಿವಕುಮಾರ ಅವರ ಪಾಲಕರೇ ಹಿರೇಬಾಗೇವಾಡಿ ಠಾಣೆಯಲ್ಲಿ ದೂರು ತಿಳಿಸಿದ್ದಾರೆ. ಐಟಿಐ ಓದುತ್ತಿದ್ದ ಶಿವಕುಮಾರಗೆ ಗೋರಕ್ಷಣೆ ಮತ್ತಿತರ ಹೋರಾಟ ಬಿಟ್ಟು ಮೊದಲು ಅಭ್ಯಾಸದ ಕಡೆ ಗಮನಕೊಡು ಎಂದು ಪಾಲಕರು ಬೈದಿದ್ದರು. ಅದಕ್ಕೆ ಅವನು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ ಎಂದು ಹಿರೇಬಾಗೇವಾಡಿ ಠಾಣೆ ಇನ್‌ಸ್ಪೆಕ್ಟರ್‌ ಖಚಿತಪಡಿಸಿದ್ದಾರೆ.

ಅಲ್ಲದೆ ಶಿವಕುಮಾರ ಅವರ ಮಾವ ಮಂಜುನಾಥ ಎನ್ನುವವನ್ನು ವಿಚಾರಣೆ ನಡೆಸಲಾಗಿದ್ದು, ಅವನ ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಶಿವಕುಮಾರ ಯಾವಾಗಲೂ ಮುಂಜುನಾಥ ಅವರ ಜತೆ ಓಡಾಡುತ್ತಿದ್ದ ಎಂದು ಗೊತ್ತಾಗಿದೆ. ಹಾಗಾಗಿ ಅವರ ದೂರವಾಣಿ ಕರೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು 'ವಿಕ'ಕ್ಕೆ ತಿಳಿಸಿದರು. ಆ ಹಿನ್ನೆಲೆಯಲ್ಲಿ ಅದು ಕೊಲೆಯಲ್ಲ ಆತ್ಮಹತ್ಯೆ ಎಂದು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ವರದಿ ಸಿದ್ಧಪಡಿಸಲಾಗಿದೆ.

ಏನಿದು ಘಟನೆ? :
ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಶಿವಕುಮಾರ ಬಲರಾಮ… ಉಪ್ಪಾರ (19) ಎನ್ನುವ ಯುವಕನ ಶವ ಪತ್ತೆಯಾಗಿತ್ತು. ಶಿವಕುಮಾರ್‌ ತನ್ನ ಮಾವನ ಜತೆಗೆ ಗೋರಕ್ಷಕನಾಗಿ ಗುರುತಿಸಿಕೊಂಡಿದ್ದರು. ಈ ಕಾರಣಕ್ಕೆ ಶಿವಕುಮಾರನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಎಲ್ಲೆಡೆ ಸುದ್ದಿ ಹಬ್ಬಿಸಲಾಗಿತ್ತು. ಕೆಲವೇ ಕ್ಷಣಗಳಲ್ಲಿ ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶವದ ಮೇಲೆ ಹಲ್ಲೆ ಮಾಡಿರುವ ಯಾವುದೇ ಕಲೆಗಳು ಇರಲಿಲ್ಲ. ಯುವಕನೇ ಆತ್ಮಹತ್ಯೆ ಮಾಡಿಕೊಂಡಿರುವಂತೆ ಇದೆ. ಸುಮ್ಮನೆ ಸುದ್ದಿ ಹಬ್ಬಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ