ಆ್ಯಪ್ನಗರ

ಗೂಡ್ಸ್‌ ವಾಹನ ಕದ್ದ ಆರೋಪಿಗಳ ಬಂಧನ

ಬೆಳಗಾವಿ: ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಗೂಡ್ಸ್‌ ವಾಹನ ಕಳ್ಳತನ ಮಾಡಿದ ಆರೋಪದಲ್ಲಿ ಇಬ್ಬರನ್ನು ನಿಪ್ಪಾಣಿ ...

Vijaya Karnataka 17 Jun 2019, 5:00 am
ಬೆಳಗಾವಿ : ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಗೂಡ್ಸ್‌ ವಾಹನ ಕಳ್ಳತನ ಮಾಡಿದ ಆರೋಪದಲ್ಲಿ ಇಬ್ಬರನ್ನು ನಿಪ್ಪಾಣಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web arrested for stealing goods vehicle
ಗೂಡ್ಸ್‌ ವಾಹನ ಕದ್ದ ಆರೋಪಿಗಳ ಬಂಧನ


ಹುಬ್ಬಳ್ಳಿಯ ಕೇಶ್ವಾಪುರದ ಗಂಗಪ್ಪ ಯಲ್ಲಪ್ಪ ಮುಳಗುಂದ (27) ಹಾಗೂ ಹಾವೇರಿ ಜಿಲ್ಲೆಯ ತಡಸ ಗ್ರಾಮದ ನೂರಬಾಷಾ ಹುಸೇನಸಾಬ್‌ ಯಾದವಾಡ (25) ಬಂಧಿತರು.

ಹಂಚಿನಾಳ ಗ್ರಾಮದ ರಾಜಾರಾಮ ನಲವಡೆ ಎಂಬುವವರು ಮನೆ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ಗೂಡ್ಸ್‌ ವಾಹನವನ್ನು ಜೂ.11ರಂದು ಬೆಳಗಿನ ಜಾವ ಕಳ್ಳತನ ಮಾಡಲಾಗಿತ್ತು. ಕಳ್ಳತನವಾದ ವಾಹನ ನಿಪ್ಪಾಣಿ ತಾಲೂಕಿನ ಮಾಂಗೂರ ಗ್ರಾಮದಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಭಾನುವಾರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 3.09 ಲಕ್ಷ ರೂ. ಮೌಲ್ಯದ ವಾಹನ, ಒಂದು ಬೈಕ್‌, ಎರಡು ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ