ಆ್ಯಪ್ನಗರ

ಬೇಡಿಕೆ ಈಡೇರಿಸುವಂತೆ ಸಹಾಯಕ ಕೃಷಿ ಅಧಿಕಾರಿಗಳ ಪ್ರತಿಭಟನೆ

ಬೆಳಗಾವಿ: ಸಿಬ್ಬಂದಿ ಕೊರತೆ ನೀಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ...

Vijaya Karnataka 19 Sep 2019, 5:00 am
ಬೆಳಗಾವಿ: ಸಿಬ್ಬಂದಿ ಕೊರತೆ ನೀಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಹಾಯಕ ಕೃಷಿ ಅಧಿಕಾರಿಗಳ ಸಂಘದ ಸದಸ್ಯರು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಚೇರಿ ಆವರಣದಲ್ಲಿಸಾಂಕೇತಿಕ ಧರಣಿ ನಡೆಸಿ, ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
Vijaya Karnataka Web 18 LBS 13_53


30 ವರ್ಷಗಳಿಂದ ಕೃಷಿ ಇಲಾಖೆಯಲ್ಲಿಸಿಬ್ಬಂದಿ ಕೊರತೆಯಿದ್ದರೂ ಯೋಜನೆಗಳ ಅನುಷ್ಠಾನದಲ್ಲಿಪ್ರಗತಿ ಸಾಧಿಸಲಾಗಿದೆ. ತಾಲೂಕಿನಲ್ಲಿಶೇ.75 ರಷ್ಟು ಸಿಬ್ಬಂದಿ ಕೊರತೆಯಿದೆ. ಆದರೆ, ಹಲವು ಯೋಜನೆಗಳ ಜತೆಗೆ ಬೇರೆ ಇಲಾಖೆಯ ಕಾರ್ಯ ನಿರ್ವಹಿಸುವುದರಿಂದ ದಿನದಿಂದ ದಿನಕ್ಕೆ ಒತ್ತಡ ಹೆಚ್ಚುತ್ತಿದೆ. ಶೇ.90ರಷ್ಟು ನಿವೃತ್ತಿ ಅಂಚಿನ ಅಧಿಕಾರಿಗಳಿದ್ದು, ದೋಷಪೂರಿತ ತಂತ್ರಾಂಶಗಳಲ್ಲಿಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲಾಖೆಯಲ್ಲಿಸಿಬ್ಬಂದಿ ಕೊರತೆ ನೀಗಿಸಬೇಕು. ಕೃಷಿ ಇಲಾಖೆ ಸಿಬ್ಬಂದಿಗೆ ಅನ್ಯ ಇಲಾಖೆಯ ಕೆಲಸ ವಹಿಸಬಾರದು. ಅಧಿಕಾರಿಗಳಿಗೆ ಮುಂಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ಸಂಘದ ರಾಜ್ಯಾಧ್ಯಕ್ಷ ಅರವಿಂದ ಹೂಗಾರ, ಉಪಾಧ್ಯಕ್ಷ ರಮೇಶ ಅರಕೇರಿ, ಎಚ್‌.ಕೆ. ಜಮಾದಾರ, ಎ.ಬಿ. ವಾಲೀಕಾರ. ಎ.ಎಚ್‌. ಹಿರಗಣ್ಣವರ, ಆರ್‌.ಜಿ. ಕೋಲಕಾರ, ಡಿ.ಎಚ್‌. ರಾಠೋಡ. ಪಿ.ಎಸ್‌. ಗೊಂದಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ