ಆ್ಯಪ್ನಗರ

ಗ್ರಾಪಂ ಅಧ್ಯಕ್ಷ ನ ಮೇಲೆ ಹಲ್ಲೆ

Vijaya Karnataka 24 Feb 2018, 5:00 am

ಕುಡಚಿ: ತಾಲೂಕಿನ ಯಡ್ರಾಂವ ಗ್ರಾಮದಲ್ಲಿ ಶುಕ್ರವಾರ ಸರಕಾರದ ಆದೇಶ ಉಲ್ಲಂಘಿಸಿ ಖಾಸಗಿ ಜಮೀನಿನಲ್ಲಿ ಕೊಳೆವೆಬಾವಿ ಕೊರೆಸುತ್ತಿರುವುದನ್ನು ಆಕ್ಷೇಪಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ನ ಮೇಲೆ ಹಲ್ಲೆ ನಡೆಸಲಾಗಿದೆ.

ಗ್ರಾಮದ ಭೀಮ ರೇವಪ್ಪ ಹೊನಕುಪ್ಪೆ ತನ್ನ ಸ್ವಂತ ಜಮೀನಿನಲ್ಲಿ ಅನುಮತಿ ಇಲ್ಲದೆ ಕೊಳವೆಬಾವಿ ಕೊರೆಸುತ್ತಿದ್ದ. ಈ ವಿಷಯ ತಿಳಿದ ಗ್ರಾಪಂ ಅಧ್ಯಕ್ಷ ಶಶಿಕಾಂತ ಮಾಳಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಹೋಗಿ ತಹಸೀಲ್ದಾರರಿಂದ ಅನುಮತಿ ಪಡೆದು ಕೊಳವೆಬಾವಿ ಕೊರೆಸುವಂತೆ ಸೂಚಿಸಿದ್ದಾರೆ. ಇದರಿಂದ ಕುಪಿತಗೊಂಡ ಭೀಮ ಹೊನಕುಪ್ಪೆ ಹಾಗೂ ಗ್ರಾಮದ ಸಿದ್ದಪ್ಪ ಹಾಲಪ್ಪ ಹಿರೇಕೊಡಿ ಎಂಬುವರು ಗ್ರಾಪಂ ಅಧ್ಯಕ್ಷ ರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಪಂ ಅಧ್ಯಕ್ಷ ಶಶಿಕಾಂತ ಮಾಳಿ ರಾಯಬಾಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ