ಆ್ಯಪ್ನಗರ

ನೆರೆ ಪೀಡಿತ ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಪ್ರಯತ್ನ

ಕಾಗವಾಡ: ಪ್ರವಾಹದಿಂದ ತೀವ್ರ ತೊಂದರೆಗೀಡಾದ ತಾಲೂಕಿನ ಜುಗೂಳ ...

Vijaya Karnataka 23 Aug 2019, 5:00 am
ಕಾಗವಾಡ: ಪ್ರವಾಹದಿಂದ ತೀವ್ರ ತೊಂದರೆಗೀಡಾದ ತಾಲೂಕಿನ ಜುಗೂಳ, ಮಂಗಾವತಿ, ಶಹಾಪುರ ಹಾಗೂ ಕೃಷ್ಣಾ ಕಿತ್ತೂರ ಗ್ರಾಮಗಳನ್ನು ಪ್ರವಾಹ ಪೀಡಿತ ಪ್ರದೇಶವೆಂದು ಘೋಷಿಸಿ ಸ್ಥಳಾಂತರಿಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ತರುವುದಾಗಿ ನೂತನ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು.
Vijaya Karnataka Web BEL-22 KAGWAD 5 NEWS PHOTO


ಈ ನಾಲ್ಕೂ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ, ಪ್ರವಾಹ ಸಂತ್ರಸ್ತರ ಅಹವಾಲುಗಳನ್ನು ಆಲಿಸಿ ಅವರು ಮಾತನಾಡಿದರು. ಪ್ರತಿವರ್ಷ ಮಳೆಗಾಲದಲ್ಲಿ ಪ್ರವಾಹದಿಂದ ತೊಂದರೆಯಾಗುತ್ತಿದ್ದು, ತಮಗೆ ಶಾಶ್ವತ ಪುನರ್ವಸತಿ ಕಲ್ಪಿಸಿ, ಮುಳುಗಡೆಯಾಗುವ ಭೂಮಿಗಳ ಪರಿಹಾರ ನೀಡುವಂತೆ ನಾಗರಿಕರು ಮನವಿ ಮಾಡಿಕೊಂಡರು.

ಸದ್ಯ ತಮಗೆ ತಾತ್ಕಾಲಿಕ ಪರಿಹಾರ ಪರಿಹಾರ ನೀಡಲಾಗುತ್ತಿದ್ದು ಹಾನಿಯಾದ ಬೆಳೆಗಳ ಸರ್ವೆ ಕಾರ್ಯ ಮುಗಿಯುತ್ತಲೇ ಬೆಳೆ ಪರಿಹಾರ ನೀಡಲಾಗುವುದು ಎಂದರು.

ಉಗಾರ ಗ್ರಾಮಕ್ಕೆ ಭೇಟಿ ನೀಡಿ ಪದ್ಮಾವತಿ ದೇವಿಯ ದರ್ಶನ ಪಡೆದ ನಂತರ ಕಾರ್ಯಕರ್ತರು ಹಾಗೂ ಮುಖಂಡರು ಶಶಿಕಲಾ ಜೊಲ್ಲೆಯವರಿಗೆ ಹೂಗುಚ್ಛಗಳನ್ನು ನೀಡಿ ಸ್ವಾಗತಿಸಿದರು. ಅಲ್ಲಿನ ಸಂತ್ರಸ್ತರ ಕುಂದು ಕೊರತೆ ಆಲಿಸಿದ ನಂತರ ಐನಾಪುರ ಪಟ್ಟಣಕ್ಕೆ ಭೇಟಿ ನೀಡಿದರು,

ಮಾಜಿ ಶಾಸಕ ರಾಜು ಕಾಗೆ ಮಾತನಾಡಿದರು. ಈ ವೇಳೆ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಶೀತಲ್‌ ಪಾಟೀಲ, ಎಪಿಎಂಸಿ ಅಧ್ಯಕ್ಷ ಅನಿಲ ಕಡೋಲೆ, ಮುಖಂಡರಾದ ಅಣ್ಣಾಸಾಬ ಪಾಟೀಲ, ಅಪ್ಪಾಸಾಬ ಚೌಗುಲೆ, ವಜ್ರಕುಮಾರ ಮಗದುಮ್‌, ಶಿವಾನಂದ ಪಾಟೀಲ, ಅಭಯಕುಮಾರ ಅಕಿವಾಟೆ, ಅಣ್ಣಾಗೌಡ ಪಾಟೀಲ, ಚಿದಾನಂದ ಡೂಗನವರ, ಶಿವಗೌಡ ಪಾರಶೆಟ್ಟಿ, ಗಜಾನನ ಯರಂಡೋಲಿ, ಅಣ್ಣಾಸಾಹೇಬ ಡೂಗನವರ, ಉದಯಕುಮಾರ ನಿಡಗುಂದಿ, ಕಾಕಾ ಪಾಟೀಲ, ಪ್ರಮೋದ ಹೊಸುರೆ, ಬಾಬು ಅಕಿವಾಟೆ, ಭೂಪಾಲ ಹೊಸೂರೆ, ಸುರೇಶ ಕುಸನಾಳೆ, ಮಹಾವೀರ ವಸವಾಡೆ, ಮನೋಜ ಕುಸನಾಳೆ, ಭರತೇಶ ಖಂಡೇರಾಜುರೆ, ಪ್ರಮೋದ ಆಳಪ್ಪನವರ, ಅಭಿಷೇಕ ಚೌಗುಲೆ, ಶಶಾಂತ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ