ಆ್ಯಪ್ನಗರ

31ಕ್ಕೆ ಅಯ್ಯಪ್ಪ ಪೂಜೆ, ಧರ್ಮಸಭೆ

ಬೆಟಗೇರಿ: ಗ್ರಾಮದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಆಶ್ರಯದಲ್ಲಿ 21ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪಣೆ, ಶ್ರೀಶೈಲ ಪೀಠದ ...

Vijaya Karnataka 21 Dec 2018, 5:00 am
ಬೆಟಗೇರಿ : ಗ್ರಾಮದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಆಶ್ರಯದಲ್ಲಿ 21ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪಣೆ, ಶ್ರೀಶೈಲ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ನಾನಾ ಸಾಧಕರು ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಮತ್ತು ಧರ್ಮಸಭೆ ಇಲ್ಲಿನ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಡಿ. 31ರಂದು ನಡೆಯಲಿದೆ.
Vijaya Karnataka Web ayyappa swamy puja and dharma sabha on 31
31ಕ್ಕೆ ಅಯ್ಯಪ್ಪ ಪೂಜೆ, ಧರ್ಮಸಭೆ


ಮುಂಜಾನೆ 10 ಗಂಟೆಗೆ ಅಯ್ಯಪ್ಪ ಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವುದು, ಸಂಜೆ 4 ಗಂಟೆಗೆ ಆನೆಯ ಮೇಲೆ ಅಯ್ಯಪ್ಪ ಸ್ವಾಮಿ ಭಾವಚಿತ್ರದ, ಶ್ರೀಶೈಲ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವದ ಭವ್ಯ ಮೆರವಣಿಗೆ ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿ ಸನ್ನಿಧಾನದ ತನಕ ಜರುಗಲಿದೆ. 6.30ಕ್ಕೆ ಅಗ್ನಿಪೂಜೆ, ಮಾಲಾಧಾರಿಗಳಿಂದ ಬೆಂಕಿ ಪಾದ ನಡೆಯುವುದು, 7ಕ್ಕೆ ಮಹಾಪೂಜೆ ನಡೆಯಲಿದೆ. ರಾತ್ರಿ 8ಕ್ಕೆ ನಾನಾ ಸಾಧಕರಿಗೆ ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ, ಧರ್ಮಸಭೆ ನಡೆಯಲಿವೆ. 9ಕ್ಕೆ ಮಹಾಪ್ರಸಾದ, ರಾಜು ದಂಡಿನ ಸಹೋದರರಿಂದ ದೀಪೋತ್ಸವ ಸೇವೆ ಬಳಿಕ ದೀಪಕ ಕೊಟೂರ ಮತ್ತು ಕುಟುಂಬದವರಿಂದ ಅನ್ನ ಸಂತರ್ಪಣೆ ನಡೆಯಲಿದೆ.

ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಮಮದಾಪುರದ ಮೌನ ಮಲ್ಲಿಕಾರ್ಜುನ ಸ್ವಾಮೀಜಿ, ಸುಣಧೋಳಿಯ ಅಭಿನವ ಶಿವಾನಂದ ಸ್ವಾಮೀಜಿ, ಕಡಕೋಳದ ಸಿದ್ದರಾಯಜ್ಜನವರು ಸೇರಿದಂತೆ ಅನೇಕ ಶ್ರೀಗಳು ಭಾಗವಹಿಸಲಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬಸವಂತ ಕೋಣಿ ಅಧ್ಯಕ್ಷ ತೆ ವಹಿಸಲಿದ್ದಾರೆ. ರಾಜೇಂದ್ರ ಸಣ್ಣಕ್ಕಿ, ಲಕ್ಷ ್ಮಣ ನೀಲನ್ನವರ, ಬಸವರಾಜ ಸಾಯನ್ನವರ ಜ್ಯೋತಿ ಪ್ರಜ್ವಲಿಸಲಿದ್ದಾರೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಪಂ ಅಧ್ಯಕ್ಷ , ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಭಾಗವಹಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ