ಆ್ಯಪ್ನಗರ

ಬೈಲವಾಡ ಸೇತುವೆ ಮುಳುಗಿ ಸಂಚಾರ ಸ್ಥಗಿತ

ಬೈಲವಾಡ ಸೇತುವೆ ಮುಳುಗಿ ಸಂಚಾರ ಸ್ಥಗಿತ ...

Vijaya Karnataka 21 Oct 2019, 5:00 am
ಬೈಲಹೊಂಗಲ: ಮಳೆಯ ಆರ್ಭಟಕ್ಕೆ ತಾಲೂಕಿನ ಬೈಲವಾಡ ಹಳ್ಳದ ಸೇತುವೆ ಮೇಲೆ ನೀರು ಹರಿದ ಪರಿಣಾಮ 1 ಗಂಟೆ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತು. ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಯಿತು.
Vijaya Karnataka Web 20HTP1_53


ಶನಿವಾರ ಹಾಗೂ ಭಾನುವಾರ ಎರಡು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಹಳ್ಳ ತುಂಬಿ ಹರಿಯಿತು. ಹೊಲಗಳಲ್ಲಿನ ಒಡ್ಡು ಒಡೆದು, ಇದ್ದ ಅಲ್ಪಸ್ವಲ್ಪ ಬೆಳೆ ನೀರು ಪಾಲಾಗಿದೆ. ಮನೆಗಳು ಹಾಗೂ ದನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಗ್ರಾಮಸ್ಥರು ಹಾಗೂ ಜಾನುವಾರುಗಳು ಪರದಾಡುವಂತಾಯಿತು. ಸುಕ್ಷೇತ್ರ ಬೈಲವಾಡ ವರ್ತಿ ದೇವಸ್ಥಾನಕ್ಕೂ ನೀರು ನುಗ್ಗಿದೆ.

ಎರಡು ವರ್ಷಗಳ ಹಿಂದೆ ನೇಸರಗಿಯಿಂದ ಬೈಲವಾಡ ಕ್ರಾಸ್‌ವರೆಗೆ ರಸ್ತೆ ನಿರ್ಮಿಸಲಾಗಿದೆ. ಆದರೆ, ರಸ್ತೆ ಅಕ್ಕಪಕ್ಕ ನೀರು ಹರಿದು ಹೋಗಲು ಕಾಲುವೆ ನಿರ್ಮಿಸಿಲ್ಲ. ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಮುರಕಿಬಾವಿ ರಸ್ತೆಯಿಂದ ದೇವಲಾಪುರ ರಸ್ತೆಯ ಎರಡೂ ಬದಿಗೆ ಮಳೆ ನೀರು ಹರಿದು ಹೋಗಲು ಕಾಲುವೆ ನಿರ್ಮಿಸಬೇಕು. ಈಗಿರುವ ಹಳ್ಳದ ಸೇತುವೆಯನ್ನು ಇನ್ನೂ ಐದು ಅಡಿ ಎತ್ತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನಾದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮಸ್ಥರ ತೊಂದರೆ ನಿವಾರಿಸಬೇಕು ಎಂದು ಗ್ರಾಪಂ ಅಧ್ಯಕ್ಷೆ ದಾಕ್ಷಾಯಿಣಿ ಗಿರೆಪ್ಪಗೌಡರ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ