ಆ್ಯಪ್ನಗರ

ಬೆಳಗಾವಿಯಲ್ಲೂ ನಾಳೆ ಬಂದ್‌

ಬೆಳಗಾವಿ: ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ವಿಪಕ್ಷ ನಾಯಕ ಬಿ...

Vijaya Karnataka 27 May 2018, 5:00 am
ಬೆಳಗಾವಿ: ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಂದ್‌ನ ನೇತೃತ್ವವನ್ನು ಅಲ್ಲಿನ ಬಿಜೆಪಿ ಶಾಸಕ ಹಾಗೂ ಪರಾಜಿತ ಅಭ್ಯರ್ಥಿಗಳಿಗೆ ವಹಿಸಲಾಗಿದೆ.
Vijaya Karnataka Web bandh by bjp in belagavi tomorrow
ಬೆಳಗಾವಿಯಲ್ಲೂ ನಾಳೆ ಬಂದ್‌


ಸೋಮವಾರ ರಾಜ್ಯಾದ್ಯಂತ ಬಂದ್‌ ನಡೆಸುವಂತೆ ಯಡಿಯೂರಪ್ಪ ಅವರು ಎರಡು ದಿನಗಳ ಹಿಂದೆ ಅಧಿವೇಶನದಲ್ಲಿ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ಘಟಕ ಸಿದ್ಧತೆ ನಡೆಸಿದ್ದು, ಪ್ರತಿ ಮಂಡಳವಾರು ಬಂದ್‌ ನಡೆಸಲು ಯೋಜನೆ ರೂಪಿಸಿದೆ. ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಲಿನ ಶಾಸಕರು ಅಥವಾ ಪರಾಜಿತ ಅಭ್ಯರ್ಥಿ ನೇತೃತ್ವ ವಹಿಸಿಕೊಂಡು ಕಾರ್ಯಕರ್ತರೊಂದಿಗೆ ಸೇರಿ ಬಂದ್‌ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ಜವಾಬ್ದಾರಿ ವಹಿಸಲಾಗಿದೆ ವಿಭಾಗೀಯ ಪ್ರಮುಖ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಸದ್ಯ ಬಂದ್‌ ನಡೆಸುವಂತೆ ಮಾತ್ರ ಸೂಚನೆ ಬಂದಿದೆ. ಪ್ರತಿಭಟನೆ ಅಥವಾ ಮನವಿ ಸಲ್ಲಿಸುವ ಬಗ್ಗೆ ಯಾವುದೇ ಮಾಹಿತಿ ಪಕ್ಷದ ರಾಜ್ಯ ನಾಯಕರಿಂದ ಬಂದಿಲ್ಲ. ಸಹಜವಾಗಿ ಬಂದ್‌ ಆಚರಿಸಿದ ವೇಳೆ ಜನರು ಒಂದೆಡೆ ಸೇರುವುದರಿಂದ ಅಲ್ಲಿಂದಲೇ ಉಪವಿಭಾಗಾಧಿಕಾರಿ ಮೂಲಕ ರಾಜ್ಯ ಪಾಲರಿಗೆ ಮನವಿ ಕೊಡುವ ವಿಚಾರವಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರ ಘಟಕದ ಬಿಜೆಪಿ ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಹಿತಿ ನೀಡಿದರು.

ಈ ಮಧ್ಯೆ ಬೈಲಹೊಂಗಲ, ಗೋಕಾಕ, ಚಿಕ್ಕೋಡಿ ಮೊದಲಾದೆಡೆ ಆಯಾ ಘಟಕಗಳು ಸೋಮವಾರ ಬಂದ್‌ ನಡೆಸುವ ತೀರ್ಮಾನ ಕೈಗೊಂಡಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ