ಆ್ಯಪ್ನಗರ

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ

ಚಿಕ್ಕೋಡಿ: ಲೋಕಸಭೆ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ...

Vijaya Karnataka 2 Aug 2019, 5:00 am
ಚಿಕ್ಕೋಡಿ : ಲೋಕಸಭೆ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕ್ಷೇತ್ರದ ವ್ಯಾಪ್ತಿಯ ಕೃಷ್ಣಾ, ದೂಧಗಂಗಾ, ವೇದಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗುವ ಸಂಭವವಿರುವುದರಿಂದ ನದಿ ತೀರದ ಜನರು ಎಚ್ಚರಿಕೆಯಿಂದಿದ್ದು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web BEL-1CKD4


ಈಗಾಗಲೇ ಹಲವಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಮುಖ ನದಿಗಳಿಗೆ ಹೆಚ್ಚಿನ ಮಳೆ ನೀರು ಹರಿದು ಬರುತ್ತಿರುವುದರಿಂದ ಹಾಗೂ ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಾಗುತ್ತಿರುವುದಿಂದ ನೀರಿನ ಮಟ್ಟ ಹೆಚ್ಚಾಗಿ ನದಿಗಳಿಗೆ ಹೆಚ್ಚಿನ ನೀರನ್ನು ಹರಿಬಿಡಲಾಗುತ್ತಿದೆ. ಇದರಿಂದಾಗಿ ಪ್ರವಾಹದ ಭೀತಿ ಎದುರಾಗುವುದರಿಂದ ಈಗಾಗಲೇ ತಹಸೀಲ್ದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಎಲ್ಲ ಅವಶ್ಯಕ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.

ಪ್ರವಾಹದ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರ ಸಂರಕ್ಷ ಣೆಯ ಹಿತದೃಷ್ಟಿಯಿಂದ ಯಾಂತ್ರೀಕೃತ ಬೋಟ್‌ ವ್ಯವಸ್ಥೆ ಸೇರಿದಂತೆ ಪ್ರವಾಹ ಪೀಡಿತರನ್ನು ಸೂಕ್ತ ಸ್ಥಳಾಂತರದೊಂದಿಗೆ ಎಲ್ಲ ಅನುಕೂಲತೆಗಳನ್ನು ಮಾಡಿಕೊಡಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೆಲವು ಗ್ರಾಮಗಳು ಪ್ರವಾಹದಿಂದಾಗಿ ಮುಳುಗಡೆಯಾಗುತ್ತಿದ್ದು, ಅಲ್ಲಿನ ನದಿ ತೀರದ ಜನರು ಆದಷ್ಟು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವುದು ಕ್ಷೇಮ ಎಂದು ಅವರು ಸಲಹೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ