ಆ್ಯಪ್ನಗರ

ಬೆಳಗಾವಿ: ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿ ಮನೆಗೆ ಬಂದ ಬಸ್‌ ಚಾಲಕ ನಿಧನ!

ದತ್ತಾ ಅವರು 15 ವರ್ಷಗಳಿಂದ ಸಾರಿಗೆ ನೌಕರ ಆಗಿ ಕೆಲಸ ಮಾಡುತ್ತಿದ್ದರು. ಸದ್ಯ ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸರಕಾರಿ ನೌಕರರೆಂದು ತಮ್ಮನ್ನು ಪರಿಗಣಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ದತ್ತಾ ಕೂಡ ಭಾಗಿಯಾಗಿದ್ದರು. ಸಂಜೆ ಮನೆಗೆ ಬಂದವರು ಮೃತಪಟ್ಟಿದ್ದಾರೆ.

Vijaya Karnataka Web 12 Dec 2020, 2:32 pm
ಬೆಳಗಾವಿ: ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಬಸ್ ಚಾಲಕ ರಾತ್ರಿ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್ (58) ಮೃತಪಟ್ಟಿದ್ದಾರೆ. ಶುಕ್ರವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ದತ್ತಾ ಅವರು ಎದೆನೋವು ಕಾಣಿಸಿಕೊಂಡ ಹಿನ್ನಲೆ ಸಂಜೆ ಮನೆಗೆ ತೆರಳಿದ್ದರು.
Vijaya Karnataka Web Crime
File photo for representation purpose only


ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸಹೋದ್ಯೋಗಿಗಳು ತಿಳಿಸಿದ್ದಾರೆ. ದತ್ತಾ ಅವರು 15 ವರ್ಷಗಳಿಂದ ಸಾರಿಗೆ ನೌಕರ ಆಗಿ ಕೆಲಸ ಮಾಡುತ್ತಿದ್ದರು. ಸದ್ಯ ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸರಕಾರಿ ನೌಕರರೆಂದು ತಮ್ಮನ್ನು ಪರಿಗಣಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ದತ್ತಾ ಕೂಡ ಭಾಗಿಯಾಗಿದ್ದರು.

ತಲೆ ಮೇಲೆ ಚಪ್ಪಲಿ ಇಟ್ಟುಕೊಂಡು ಮುಷ್ಕರ ಮುಂದುವರಿಸಿದ ಬಸ್‌ ನೌಕರರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ