ಆ್ಯಪ್ನಗರ

ಬೆಳಗಾವಿಯಲ್ಲಿ ನೀರಿನ ಪ್ರವಾಹಕ್ಕೆ ಕೊಚ್ಚಿ ಚರಂಡಿಗೆ ಬಿದ್ದ KSRTC ಬಸ್

ಕೆಎಸ್‌ಆರ್‌ಟಿಸಿ ಬಸ್‌ವೊಂದು ನೀರಿನ ಪ್ರವಾಹಕ್ಕೆ ಸಿಲುಕಿ ಚರಂಡಿ ಬಿದ್ದಿರುವ ಘಟನೆ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

Vijaya Karnataka Web 10 Aug 2019, 11:05 am
ಬೆಳಗಾವಿ: ಜಿಲ್ಲೆಯ ಪುಣಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ವಂಟಮೂರಿ ಘಾಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ನೀರಿನ ಪ್ರವಾಹಕ್ಕೆ ಸಿಲುಕಿ ಶನಿವಾರ ಚರಂಡಿ ಬಿದ್ದಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ.
Vijaya Karnataka Web bus


ಬೆಳಗಾವಿ ಘಟಕದ ಮೈಸೂರು - ಪುಣಾ ಬಸ್ ರಸ್ತೆ ಮೇಲೆ ಹರಿದ ನೀರಿನ ರಭಸಕ್ಕೆ ತಿರುಗಿ ಚರಂಡಿಯಲ್ಲಿ ಬಿದ್ದಿದೆ. ಅದೃಷ್ಟವಶಾತ್
ಪ್ರಯಾಣಿಕರಿಗೆ ಯಾವುದೇ ಹಾನಿ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದೊಂದು ವಾರದಿಂದ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಬಾಗಲಕೋಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿತ

ಬಾಗಲಕೋಟೆ ಜಿಲ್ಲೆಯ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ನೀರಿನ ಒತ್ತಡದಿಂದ ಕುಸಿದುಬಿದ್ದಿದೆ.
ಕುಳಗೇರಿ ಕ್ರಾಸ್ ನಿಂದ ಕೊಣ್ಣೂರಗೆ ಹೋಗುವ ಮಾರ್ಗದಲ್ಲಿ ಹೆದ್ದಾರಿ ಕಿತ್ತು ಹೋಗಿದೆ. ಒಂದು ವರ್ಷದ ಹಿಂದಷ್ಟೆ ನಿರ್ಮಿಸಿದ್ದ ಹೆದ್ದಾರಿಯ ಕಳಪೆ ಕಾಮಗಾರಿ ಈಗ ಬಯಲಿಗೆ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ