ಆ್ಯಪ್ನಗರ

ಉಗ್ರರ ಜತೆ ಹೋರಾಡಿ ವೀರ ಮರಣ ಹೊಂದಿದ ಬೆಳಗಾವಿ ಯೋಧ

ಭೋಜರಾಜ ಜಾಧವ (28) ವೀರ ಮರಣ ಹೊಂದಿದ ಯೋಧ.

Vijaya Karnataka Web 27 Nov 2018, 5:06 pm
ಬೆಳಗಾವಿ: ಜಮ್ಮುಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಸೇವೆಯಲ್ಲಿದ್ದ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೂದಿಹಾಳ ಗ್ರಾಮದ ಯೋಧ ಉಗ್ರರ ಜತೆಗಿನ ಹೋರಾಟದಲ್ಲಿ ವೀರಮರಣ ಹೊಂದಿದ್ದಾರೆ.
Vijaya Karnataka Web indian army


ಭೋಜರಾಜ ಜಾಧವ (28) ವೀರ ಮರಣ ಹೊಂದಿದ ಯೋಧ.

ಮೂಲತಃ ಬೂದಿಹಾಳ ಗ್ರಾಮದ ಭೋಜರಾಜ್ ಸೋಮವಾರ ತಡರಾತ್ರಿ ಉಗ್ರರೊಂದಿಗೆ ನಡೆದ ಹೋರಾಟದಲ್ಲಿ ಭಾಗವಹಿಸಿದ್ದರು. ಬುಧವಾರ ಮಧ್ಯಾಹ್ನದ ಹೊತ್ತಿಗೆ ಯೋಧನ ಮೃತದೇಹ ಸ್ವಗ್ರಾಮ ಬೂದಿಹಾಳಕ್ಕೆ ಆಗಮಿಸಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಕಳೆದ ಒಂದೂವರೆ ವರ್ಷಗಳ ಹಿಂದೆಯಷ್ಟೇ ಭೋಜರಾಜ್ ಜಾಧವ ಸೇನೆಗೆ ಸೇರಿದ್ದರು. ಅವರ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ