ಆ್ಯಪ್ನಗರ

ಶೀಘ್ರ ಬೆಳಗಾವಿ ಭೇಟಿ, 'ಸ್ಮಾರ್ಟ್‌' ಪ್ರಗತಿ ಪರಿಶೀಲನೆ

ಸಂಸದ ಸುರೇಶ ಅಂಗಡಿಗೆ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್‌ ಸಿಂಗ್‌ ಭರವಸೆ

Vijaya Karnataka 1 Aug 2018, 5:00 am
ಬೆಳಗಾವಿ: ನಗರಕ್ಕೆ ಶೀಘ್ರ ಭೇಟಿ ನೀಡಿ ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನೆ ನಡೆಸುವುದಾಗಿ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್‌ ಸಿಂಗ್‌ ಹೇಳಿದ್ದಾರೆ.
Vijaya Karnataka Web BLG-3107-2-52-31MAHESH6


ದೆಹಲಿಯ ಸಚಿವಾಲಯದಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ ಸಂಸದ ಸುರೇಶ ಅಂಗಡಿ ಅವರಿಗೆ ಸಚಿವರು ಈ ಭರವಸೆ ನೀಡಿದರು. ಅಲ್ಲದೆ, ಆದಷ್ಟು ಶೀಘ್ರ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿ ತ್ವರಿತಗೊಳಿಸಲು ಸೂಚನೆ ನೀಡುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ಸಂಸದ ಅಂಗಡಿ, ''ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ಸ್ಮಾರ್ಟ್‌ ಸಿಟಿ ಕಾಮಗಾರಿ ಅನುಷ್ಠಾನದಲ್ಲಿ ರಾಜ್ಯ ಸರಕಾರ ನಿರಾಸಕ್ತಿ ವಹಿಸಿರುವುದರಿಂದ ಬೆಳಗಾವಿ ಸ್ಮಾರ್ಟ್‌ ಸಿಟಿ ಯೋಜನೆ ಕುಂಟುತ್ತ ಸಾಗುತ್ತಿದೆ. ತೀವ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ರಾಜ್ಯಕ್ಕೆ ಸೂಚನೆ ನೀಡಬೇಕು'', ಎಂದು ಸಚಿವರಲ್ಲಿ ವಿನಂತಿಸಿದರು.

''ಕೇಂದ್ರ ಸರಕಾರ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಿದ್ದರೂ ಯಾವುದೇ ಕಾಮಗಾರಿ ಸರಿಯಾಗಿ ಅನುಷ್ಠಾನಗೊಂಡಿಲ್ಲ. ಅಧಿಕಾರಿಗಳು ಇನ್ನೂ ಆಮೆ ಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಮಾರ್ಟ್‌ ಸಿಟಿ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಹಾಯಕ ಬಿಟ್ಟರೆ ಇನ್ನುಳಿದ ಎಲ್ಲ ಹುದ್ದೆಗಳು ಖಾಲಿ ಉಳಿದಿವೆ'', ಎಂದು ಸಚಿವರ ಗಮನ ಸೆಳೆದರು.

ಬಿಜೆಪಿ ಮುಖಂಡ ಮುತಾಲಿಕ ದೇಸಾಯಿ ಸಂಸದರ ಜತೆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ