ಆ್ಯಪ್ನಗರ

ಬಿಇಒ ಕಚೇರಿ ಸಿಬ್ಬಂದಿಗೆ ಪ್ರಾಣಭೀತಿ!

ಲಗಮಣ್ಣಾ ಸಣ್ಣಲಚ್ಚಪ್ಪಗೋಳ ಬೆಳಗಾವಿ ನಗರದ ...

Vijaya Karnataka 25 Jul 2018, 5:00 am
ಬೆಳಗಾವಿ: ನಗರದ ಚವಾಟ ಗಲ್ಲಿಯಲ್ಲಿನ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟಡ ಕುಸಿಯುವ ಭೀತಿಯಲ್ಲೇ ನಿತ್ಯ ಕೆಲಸ ನಿರ್ವಹಿಸುತ್ತಿದ್ದಾರೆ.
Vijaya Karnataka Web BEL-24 LBS 3A


ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಮಳೆಯಾದರೆ ಸಾಕು ಸೋರುತ್ತದೆ. ಜತೆಗೆ ಛಾವಣಿಯ ಸಿಮೆಂಟ್‌ ಕಳಚಿ ಬೀಳುತ್ತಿದೆ. ಗೋಡೆಗಳು ಎಲ್ಲೆಂದರಲ್ಲಿ ಬಿರುಕು ಬಿಟ್ಟಿವೆ. ಇದರಿಂದಾಗಿ ಕಚೇರಿಯ ಸಿಬ್ಬಂದಿ ನಿತ್ಯ ಆತಂಕದಲ್ಲಿಯೇ ಕೆಲಸ ಮಾಡುವಂತಾಗಿದೆ. ಈಗಾಗಾಲೇ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಛಾವಣಿಯ ತುಂಡು ಬಿದ್ದು ಗಾಯಗೊಂಡ ನಿದರ್ಶನಗಳೂ ಇವೆ. ಇಷ್ಟಾದರೂ ಜಿಲ್ಲಾಡಳಿತವಾಗಲಿ ಅಥವಾ ಹಿರಿಯ ಅಧಿಕಾರಿಗಳಾಗಲಿ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ನೂತನ ಕಟ್ಟಡ ನಿರ್ಮಾಣಕ್ಕೆ ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ 6 ಗುಂಟೆ ಜಾಗವನ್ನು ಹಸ್ತಾಂತರಿಸುವಂತೆ ಜಿಲ್ಲಾಡಳಿತಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೇ 2017ರ ಅಕ್ಟೋಬರ್‌ 11 ರಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಆದರೆ, ವರ್ಷ ಕಳೆಯಲೂ ಬಂದರೂ ಈವರೆಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ಕಟ್ಟಡ ಸಮಸ್ಯೆಗೆ ಯಾವುದೇ ಪರಿಹಾರ ಸಿಗದ ಕಾರಣ ಶಿಕ್ಷಣ ಇಲಾಖೆ ಅಧಿಕಾರಿಗಳು ಶಿಥಿಲ ಕಟ್ಟಡವನ್ನು ಬಿಟ್ಟು ಕಡತ, ಪಠ್ಯಪುಸ್ತಕಗಳು ಹಾಗೂ ಸಿಬ್ಬಂದಿಯ ರಕ್ಷಣೆಗಾಗಿ ಸುಸಜ್ಜಿತ ಕಟ್ಟಡ ಬಾಡಿಗೆ ಪಡೆದು ಕಾರ್ಯಾಲಯ ಆರಂಭಿಸಲು ಮುಂದಾಗಿದ್ದಾರೆ.

ಈಗಾಗಲೇ ನೂತನ ಕಟ್ಟಡಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಸ್ಥಳ ನಿಗದಿಗಾಗಿ ಪತ್ರ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಸಹ ಕಟ್ಟಡಕ್ಕೆ ಸ್ಥಳ ಮಂಜೂರಾತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ. ನೂತನ ಕಟ್ಟಡ ಸಿದ್ಧವಾಗುವವರೆಗೂ ಬಾಡಿಗೆ ಕಟ್ಟಡ ಹುಡುಕುತ್ತಿದ್ದೇವೆ.
-ಎಂ.ಎಲ್‌.ನನ್ನಾರಿ, ಪತ್ರಾಂಕಿತ ವ್ಯವಸ್ಥಾಪಕ, ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ