ಬೆಳಗಾವಿ: ಬಿಜೆಪಿಯವರು ಹಿಂದುತ್ಚವನ್ನು ಗುತ್ತಿಗೆ ಹಿಡಿದವರ ಹಾಗೆ ಆಡುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಗೆ ತಿರುಗೇಟು ನೀಡಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ, ಜಾತಿ ಜಾತಿ ನಡುವೆ ರಾಜಕೀಯ ಮಾಡುವ ಬದಲು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಅದನ್ನ ಬಿಟ್ಟು ಹಿಂದುತ್ವದ ಹೆಸರಿನಲ್ಲಿ ವಿಷಬೀಜ ಬಿತ್ತುವುದು ಸರಿಯಲ್ಲ ಎಂದು ಹರಿಹಾಯ್ದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಪ್ರವಾಸದಲ್ಲಿ ದೇವಸ್ಥಾನಗಳಿಗೆ ತೆರಳಿದ್ದಾರೆ. ಅದಕ್ಕೆ ಏಕೆ ಬಿಜೆಪಿಯವರಿಗೆ ಹೊಟ್ಟೆ ಉರಿ ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಹಿಂದುತ್ವವನ್ನು ಗುತ್ತಿಗೆ ಪಡೆದವರ ಹಾಗೆ ಆಡುತ್ತಿದ್ದಾರೆ. ಸನಾತನ ಧರ್ಮ ಹಿಂದುತ್ವ ಇದರಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.
ನಗರ ಪೊಲೀಸ್ ಆಯುಕ್ತರ ಸ್ವಂತ ಕಚೇರಿ ನಿರ್ಮಾಣಕ್ಕೆ ಸರಕಾರ ಅನುದಾನ ಬಿಡುಗಡೆ ಮಾಡಿದೆ. ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಈ ಹಿಂದೆ ಚಳಿಗಾಲ ಅಧಿವೇಶನದಲ್ಲಿ ನೀರಾವರಿ ಇಲಾಖೆಯಲ್ಲಿ ಕಚೇರಿ ಪ್ರಾರಂಭಿಸುವ ಯೋಚನೆ ಇತ್ತು. ಆದರೆ ನೀರಾವರಿ ಇಲಾಖೆಯವರು ಬಿಟ್ಟು ಕೊಡಲಿಲ್ಲ ಎಂದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ, ಜಾತಿ ಜಾತಿ ನಡುವೆ ರಾಜಕೀಯ ಮಾಡುವ ಬದಲು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಅದನ್ನ ಬಿಟ್ಟು ಹಿಂದುತ್ವದ ಹೆಸರಿನಲ್ಲಿ ವಿಷಬೀಜ ಬಿತ್ತುವುದು ಸರಿಯಲ್ಲ ಎಂದು ಹರಿಹಾಯ್ದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಪ್ರವಾಸದಲ್ಲಿ ದೇವಸ್ಥಾನಗಳಿಗೆ ತೆರಳಿದ್ದಾರೆ. ಅದಕ್ಕೆ ಏಕೆ ಬಿಜೆಪಿಯವರಿಗೆ ಹೊಟ್ಟೆ ಉರಿ ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಹಿಂದುತ್ವವನ್ನು ಗುತ್ತಿಗೆ ಪಡೆದವರ ಹಾಗೆ ಆಡುತ್ತಿದ್ದಾರೆ. ಸನಾತನ ಧರ್ಮ ಹಿಂದುತ್ವ ಇದರಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.
ನಗರ ಪೊಲೀಸ್ ಆಯುಕ್ತರ ಸ್ವಂತ ಕಚೇರಿ ನಿರ್ಮಾಣಕ್ಕೆ ಸರಕಾರ ಅನುದಾನ ಬಿಡುಗಡೆ ಮಾಡಿದೆ. ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಈ ಹಿಂದೆ ಚಳಿಗಾಲ ಅಧಿವೇಶನದಲ್ಲಿ ನೀರಾವರಿ ಇಲಾಖೆಯಲ್ಲಿ ಕಚೇರಿ ಪ್ರಾರಂಭಿಸುವ ಯೋಚನೆ ಇತ್ತು. ಆದರೆ ನೀರಾವರಿ ಇಲಾಖೆಯವರು ಬಿಟ್ಟು ಕೊಡಲಿಲ್ಲ ಎಂದರು.