ಆ್ಯಪ್ನಗರ

ನಾಳೆ ಬಿಜೆಪಿಯಿಂದ ಗೋಕಾಕ ಬಂದ್‌

ಗೋಕಾಕ : ಕರ್ನಾಟಕದ ನೂತನ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳದ ಹಿನ್ನೆಲೆಯಲ್ಲಿ ಸೋಮವಾರ ಗೋಕಾಕ ಬಂದ್‌ ಕರೆ ನೀಡಲಾಗಿದೆ...

Vijaya Karnataka 27 May 2018, 5:00 am
ಗೋಕಾಕ: ಕರ್ನಾಟಕದ ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳದ ಹಿನ್ನೆಲೆಯಲ್ಲಿ ಸೋಮವಾರ ಗೋಕಾಕ ಬಂದ್‌ ಕರೆ ನೀಡಲಾಗಿದೆ.
Vijaya Karnataka Web bjp called for gokak bandh tomorrow
ನಾಳೆ ಬಿಜೆಪಿಯಿಂದ ಗೋಕಾಕ ಬಂದ್‌


ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳ ಸಂಪೂರ್ಣ ಸಾಲಮನ್ನಾ ಮಾಡಲು ಒತ್ತಾಯಿಸಿ ಬಿಜೆಪಿ ರಾಜಾಧ್ಯಕ್ಷ ಹಾಗೂ ಪ್ರತಿಪಕ್ಷ ದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಮೇ 28 ರಂದು ಬಿಜೆಪಿ ವತಿಯಿಂದ ಕರ್ನಾಟಕ ಬಂದ್‌ ಕರೆ ನೀಡಿದ್ದರ ಭಾಗವಾಗಿ ಗೋಕಾಕ ಬಂದ್‌ನೊಂದಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ಅಂದು ಬೆಳಗ್ಗೆ 11ಕ್ಕೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಅಪ್ಸರಾ ಖೂಟ, ಶೆಟ್ಟಿ ಖೂಟ, ಭಾಪನಾ ಖೂಟ, ಮುಖಾಂತರ ಹಾಯ್ದು ಸಂಗೊಳ್ಳಿ ರಾಯಣ್ಣಾ ವೃತ್ತದ ಮುಖಾಂತರ ಬಸ್‌ ನಿಲ್ದಾಣ ರಸ್ತೆ ಮಾರ್ಗವಾಗಿ ತೆರಳಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ನಂತರ ತಾಲೂಕು ದಂಡಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿಸಲ್ಲಿಸಲಾಗುವುದು ಎಂದು ಗೋಕಾಕ ನಗರ ಹಾಗೂ ಗ್ರಾಮೀಣ ಘಟಕಗಳ ಅಧ್ಯಕ್ಷ ರಾದ ವಿರೂಪಾಕ್ಷಿ ಯಲಿಗಾರ ಹಾಗೂ ಶಶಿಧರ ದೇಮಶಟ್ಟಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ