ಆ್ಯಪ್ನಗರ

ಬೆಳಗಾವಿಯಲ್ಲಿ ಶುಕ್ರವಾರ ಬಿಜೆಪಿ ಕೋರ್‌ ಕಮಿಟಿ ಸಭೆ, ಗಡಿ ಜಿಲ್ಲೆ ಕೇಸರಿಮಯ

ಶನಿವಾರ ನಡೆಯಲಿರುವ ಕಾರ್ಯಕಾರಿಣಿಯ ರೂಪುರೇಷೆಗಳ ಕುರಿತು ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ, ಬೆಳಗಾವಿ ಲೋಕಸಭೆ ಉಪಚುನಾವಣೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಎದುರಾಗಿರುವ ವಿಧಾನಸಭೆ ಉಪಚುನಾವಣೆಗಳ ಕುರಿತೂ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Vijaya Karnataka 3 Dec 2020, 9:44 pm
ಬೆಳಗಾವಿ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ, ಲೋಕಸಭೆ ಹಾಗೂ ವಿಧಾನಸಭೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಬಿಜೆಪಿ ರಾಜ್ಯ ಕೋರ್‌ ಕಮಿಟಿ ಸಭೆ ಮಹತ್ವ ಪಡೆದುಕೊಂಡಿದೆ.
Vijaya Karnataka Web Channamma Circle Belagavi

ಕೇಸರಿಮಯವಾಗಿರುವ ಬೆಳಗಾವಿಯ ಚನ್ನಮ್ಮ ವೃತ್ತ


ನಗರದ ಖಾಸಗಿ ಹೋಟೆಲ್‌ನಲ್ಲಿ ಸಂಜೆ 7.30ಕ್ಕೆ ಕೋರ್‌ ಕಮಿಟಿ ಸಭೆ ಆರಂಭವಾಗಲಿದೆ. ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ, ಕಂದಾಯ ಸಚಿವ ಆರ್‌ ಅಶೋಕ್‌ ಸೇರಿದಂತೆ ಸಚಿವರು, ಶಾಸಕರು, ಬಿಜೆಪಿ ರಾಜ್ಯ ಘಟಕದ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಶನಿವಾರ ನಡೆಯಲಿರುವ ಕಾರ್ಯಕಾರಿಣಿಯ ರೂಪುರೇಷೆಗಳ ಕುರಿತು ಕೋರ್‌ ಕಮಿಟಿಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ, ಬೆಳಗಾವಿ ಲೋಕಸಭೆ ಉಪಚುನಾವಣೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಎದುರಾಗಿರುವ ವಿಧಾನಸಭೆಗಳ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಯ ಕುರಿತೂ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

5ರಂದು ಗಡಿ ನಾಡಿಗೆ ಬಿಜೆಪಿ ನಾಯಕರ ದಂಡು; ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ‍್ಯಕಾರಿಣಿ
ಶನಿವಾರ ರಾಜ್ಯ ಕಾರ್ಯಕಾರಿಣಿ

ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಇದರಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ಪ್ರಮುಖರು ಸೇರಿದಂತೆ ಒಟ್ಟು 120 ಜನರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿಯ ಮಹತ್ವದ ಈ ಎರಡು ಚಟುವಟಿಕೆಗಳ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಸಂಪೂರ್ಣ ಕೇಸರಿಮಯವಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್‌, ಕೇಸರಿ ಧ್ವಜಗಳು ರಾರಾಜಿಸುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ