ಆ್ಯಪ್ನಗರ

ಸೋಲುವ ಭೀತಿಗೆ ಬಿಜೆಪಿಯಿಂದ ಹುಕ್ಕೇರಿ ಮೇಲೆ ಅಪವಾದ

ಚಿಕ್ಕೋಡಿ : ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿಯವರು ಹತಾಶರಾಗಿ ...

Vijaya Karnataka 17 Apr 2019, 5:00 am
ಚಿಕ್ಕೋಡಿ : ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿಯವರು ಹತಾಶರಾಗಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ದ್ರಾಕ್ಷಾರಸ ಮಹಾಮಂಡಳಿ ಮಾಜಿ ಅಧ್ಯಕ್ಷ ರವಿ ಮಿರ್ಜೆ ತಿಳಿಸಿದರು.
Vijaya Karnataka Web BEL-16CKD2


ಚಿಕ್ಕೋಡಿ ನಗರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿಲ್ಲದೆ ಕೃಷ್ಣಾ ನದಿ ಬತ್ತಿ ಹೋಗಿದೆ. ಇಂತಹ ಸಂದರ್ಭದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆ ಬಂದ್‌ ಇದ್ದು, ಆದರೆ ಕಾಡಾಪುರ ಕೆರೆಗೆ ನೀರು ಬರುತ್ತಿಲ್ಲವೆಂದು ಬಿಜೆಪಿ ನಾಯಕರು ಚುನಾವಣೆ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ಪ್ರತಿಪಕ್ಷ ದ ನಾಯಕರ ಆರೋಪವನ್ನು ಕಾಡಾಪುರದ ಜನ ನಂಬುವುದಿಲ್ಲ ಎಂದರು.

ಕಾಡಾಪುರ ಕೆರೆಗೆ ನೀರು ಬರುತ್ತಿಲ್ಲವೆಂಬ ಬಿಜೆಪಿ ಪಕ್ಷ ದ ನಾಯಕರ ಆರೋಪ ಸತ್ಯಕ್ಕೆ ದೂರವಾಗಿದೆ. ನೀರಿಲ್ಲದೆ ಕೃಷ್ಣಾ ನದಿ ಬತ್ತಿ ಹೋಗಿದೆ. ಇಂತಹ ಸಂದರ್ಭದಲ್ಲಿ ಕೆರೆಗೆ ಹೇಗೆ ನೀರು ಬರುತ್ತದೆ ಎಂದು ಪ್ರಶ್ನಿಸಿದರು. ಕಾಡಾಪುರ ಕೆರೆ ರೈತರಿಗೆ ವರದಾನವಾಗಿದೆ. ಕೆರೆ ತುಂಬುವುದರಿಂದ ಸುಮಾರು 10 ಸಾವಿರ ಎಕರೆ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರಕಿದೆ. ಇಂಗು ಕೆರೆ ಇರುವುದರಿಂದ ನದಿಯಿಂದ ಬರುವ ನೀರು ತೆರೆದ ಬಾವಿ ಹಾಗೂ ಕೊಳವೆ ಬಾವಿಗೆ ಅನುಕೂಲವಾಗಿದೆ. ಚುನಾವಣೆ ಸಂದರ್ಭದಲ್ಲಿ ಕೆರೆ ತುಂಭಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಶುದ್ಧ ಸುಳ್ಳಾಗಿದೆ ಎಂದರು.

ಅಭಿವೃದ್ಧಿ ಮಾಡುವ ಜನಪ್ರತಿನಿಧಿಗಳ ಬೆನ್ನು ತಟ್ಟಬೇಕೇ ವಿನಃ ಕಾಲು ಎಳೆಯುವ ಕೆಲಸ ಮಾಡಬಾರದು. ಬಿಜೆಪಿ ನಾಯಕರ ಹಿಡಿತದಲ್ಲಿರುವ ಸಕ್ಕರೆ ಕಾರ್ಖಾನೆ ಸದಸ್ಯರಿಗೆ ಸಮರ್ಪಕ ಕಬ್ಬಿನ ದರ ಕೊಡದೆ ರೈತರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಅದನ್ನು ಬಿಟ್ಟು ರೈತರ ಪರವಾಗಿ ಕೆಲಸ ಮಾಡುವ ಪ್ರಕಾಶ ಹುಕ್ಕೇರಿ ವಿರುದ್ಧ ಆರೋಪ ಮಾಡುವ ನೈತಿಕ ಹಕ್ಕು ಬಿಜೆಪಿ ನಾಯಕರಿಗಿಲ್ಲ ಎಂದರು.

ಕೆರೆಗೆ ನೀರು ತುಂಬಿಸುವ ಯೋಜನೆ ಚಾಲ್ತಿಯಲ್ಲಿದೆಯೇ ಇಲ್ಲ ಸ್ಥಗಿತವಾಗಿದೆಯೇ ಎಂಬುದನ್ನು ಕಾಡಾಪುರದ ರೈತರ ಸಮ್ಮುಖದಲ್ಲಿ ಚರ್ಚಿಸಲು ನಾವು ಸಿದ್ಧವಿದ್ದು, ವಿರೋಧ ಪಕ್ಷ ದ ನಾಯಕರು ಬಹಿರಂಗ ಚರ್ಚೆಗೆ ಬರಬೇಕೆಂದು ಸವಾಲು ಹಾಕಿದರು.

ತಾಪಂ ಸದಸ್ಯ ಪ್ರಕಾಶ ರಾಚನ್ನವರ, ಸುಭಾಷ ಸನದಿ, ವಿನೋದ ಕೋಳಿ ಮುಂತಾದವರು ಉಪಸ್ಥಿತರಿದ್ದರು..

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ