ಆ್ಯಪ್ನಗರ

ರೈತರ ನಾನಾ ಬೇಡಿಕೆ ಈಡೇರಿಸುವಂತೆ ಬಿಜೆಪಿ ಪ್ರತಿಭಟನೆ

ಖಾನಾಪುರ: ತಾಪಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ದ ಕಿಸಾನ್‌ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ಪಕ್ಷ ದ ಮುಖಂಡರು ...

Vijaya Karnataka 15 Jun 2019, 5:00 am
ಖಾನಾಪುರ : ರೈತಾಪಿ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ದ ಕಿಸಾನ್‌ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ಪಕ್ಷ ದ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web BEL-14KHANAPUR2


ಪಟ್ಟಣದ ಶಿವಸ್ಮಾರಕ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ರೈತರ ಸಾಲ ಮನ್ನಾ ವಿಷಯದಲ್ಲಿ ರಾಜ್ಯ ಸರಕಾರ ವಿಳಂಬ ನೀತಿ ಎಣಿಸುತ್ತಿರುವುದನ್ನು ಖಂಡಿಸಿದರು. ಕಳೆದ ಹಂಗಾಮಿನಲ್ಲಿ ರೈತರಿಂದ ಕಬ್ಬು ಪಡೆದ ಸಕ್ಕರೆ ಕಾರ್ಖಾನೆಗಳು ಅವರಿಗೆ ಬಾಕಿ ಬಿಲ್‌ ಪಾವತಿಸದೇ ಸತಾಯಿಸುತ್ತಿದ್ದು, ಅಧಿಕಾರಿಗಳು ಮಧ್ಯಪ್ರವೇಶಿಸಿ ಕಬ್ಬಿನ ಬಾಕಿ ಬಿಲ್‌ ಕೊಡಿಸಬೇಕು. ಕಾಡುಪ್ರಾಣಿಗಳಿಂದ ಬೆಳೆಹಾನಿಗೆ ಅಗತ್ಯ ಪರಿಹಾರ ಒದಗಿಸುವುದು ಸೇರಿದಂತೆ ರೈತರ ಇತರೆ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಪಕ್ಷ ದ ಬ್ಲಾಕ್‌ ಅಧ್ಯಕ್ಷ ವಿಠ್ಠಲ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೋಚೇರಿ, ಪ್ರಧಾನ ಕಾರ್ಯದರ್ಶಿ ಸಂಜಯ ಕಂಚಿ, ಕಿಸಾನ್‌ ಮೋರ್ಚಾ ಅಧ್ಯಕ್ಷ ಶಿವಪುತ್ರ ಸಂಬರಗಿ, ಮಾಜಿ ಜಿಪಂ ಸದಸ್ಯ ಬಾಬುರಾವ್‌ ದೇಸಾಯಿ, ಜಿಪಂ ಸದಸ್ಯ ಜೀತೆಂದ್ರ ಮಾದಾರ, ಜಾರ್ಡನ್‌ ಗೋನ್ಸಾಲ್ವಿಸ್‌, ಯಶವಂತ ಕೋಡೊಳಿ, ಸಂಜಯ ಕುಬಲ, ಸುರೇಶ ದೇಸಾಯಿ ಸೇರಿದಂತೆ ತಾಲೂಕಿನ ರೈತರು, ಪಕ್ಷ ದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು. ತಹಸೀಲ್ದಾರ್‌ ಶಿವಾನಂದ ಉಳ್ಳೇಗಡ್ಡಿ ಮನವಿ ಸ್ವೀಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ