ಆ್ಯಪ್ನಗರ

ಎಸ್‌ಬಿಐನಲ್ಲಿ ಗ್ರಾಹಕ ಸ್ನೇಹಿ ವಾತಾವರಣ ನಿರ್ಮಿಸಲು ಬಿಜೆಪಿ ಆಗ್ರಹ

ಪಟ್ಟಣದ ಭಾರತೀಯ ಸ್ಟೇಟ್‌ ಬ್ಯಾಂಕ್‌ ಶಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ...

Vijaya Karnataka 14 Jul 2019, 5:00 am
ಖಾನಾಪುರ: ಪಟ್ಟಣದ ಭಾರತೀಯ ಸ್ಟೇಟ್‌ ಬ್ಯಾಂಕ್‌ ಶಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಹಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದಿಲ್ಲ. ಬ್ಯಾಂಕಿಗೆ ಭೇಟಿ ನೀಡುವ ಗ್ರಾಮೀಣ ಭಾಗದ ಅನರಕ್ಷ ಸ್ಥ ಬ್ಯಾಂಕ್‌ ಗ್ರಾಹಕರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಾರೆ. ಕಾರಣ ಶಾಖೆಯಲ್ಲಿ ಗ್ರಾಹಕ ಸ್ನೇಹಿ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಕ್ಷ ಬ್ಯಾಂಕ್‌ನ ವಿಭಾಗೀಯ ವ್ಯವಸ್ಥಾಪಕರನ್ನು ಆಗ್ರಹಿಸಿದೆ.
Vijaya Karnataka Web bjp seeks to create customer friendly environment at sbi
ಎಸ್‌ಬಿಐನಲ್ಲಿ ಗ್ರಾಹಕ ಸ್ನೇಹಿ ವಾತಾವರಣ ನಿರ್ಮಿಸಲು ಬಿಜೆಪಿ ಆಗ್ರಹ


ಈ ಕುರಿತು ಈಚೆಗೆ ವಿವರವಾದ ಪತ್ರ ಬರೆದಿರುವ ಪಕ್ಷ ದ ಬ್ಲಾಕ್‌ ಅಧ್ಯಕ್ಷ ವಿಠ್ಠಲ ಪಾಟೀಲ ಮತ್ತು ಪಕ್ಷ ದ ಮುಖಂಡರು ತಾಲೂಕಿನ ಅರಣ್ಯಪ್ರದೇಶದಿಂದ ಸುತ್ತುವರಿದ ಗ್ರಾಮಗಳಿಂದ ಬ್ಯಾಂಕಿಗೆ ಬರುವ ಗ್ರಾಹಕರು ತಮ್ಮ ಒಂದು ಕೆಲಸಕ್ಕಾಗಿ ಇಡೀ ದಿನ ಕ್ಯೂ ನಿಲ್ಲಬೇಕಾದ ಅನಿವಾರ್ಯತೆ ಇದೆ. ಬ್ಯಾಂಕಿನಲ್ಲಿ ಗ್ರಾಹಕರಿಗೆ ಅಗತ್ಯ ಸೌಲಭ್ಯ ಮತ್ತು ಮಾಹಿತಿಯನ್ನು ನೀಡಲಾಗುತ್ತಿಲ್ಲ. ಒಂದು ಬಾರಿ ಕೆವಾಯ್‌ಸಿ ದಾಖಲೆಗಳನ್ನು ನೀಡಿದ ಗ್ರಾಹಕರಿಗೆ ಪದೇ ಪದೆ ನೀಡುವಂತೆ ತೊಂದರೆ ನೀಡುತ್ತಾರೆ. ಇನ್ನೊಂದೆಡೆ ಬ್ಯಾಂಕಿನ ಎಟಿಎಂ, ಪಾಸ್‌ ಬುಕ್‌ ಮುದ್ರಣ ಮತ್ತು ಚಿಲ್ಲರೆ ನೀಡುವ ಯಂತ್ರಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಬ್ಯಾಂಕ್‌ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಕೂಡಲೇ ಖಾನಾಪುರ ಎಸ್‌ಬಿಐ ಶಾಖೆಯಲ್ಲಿ ಗ್ರಾಹಕರ ಕುಂದುಕೊರತೆ ಆಲಿಸುವ ಸಭೆಯನ್ನು ಏರ್ಪಡಿಸಬೇಕು. ಬ್ಯಾಂಕಿನ ಸಿಬ್ಬಂದಿಯ ವರ್ತನೆಯ ಬಗ್ಗೆ ತನಿಖೆ ಕೈಗೊಂಡು ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್‌ ಸೌಲಭ್ಯ ಒದಗಿಸಬೇಕು ಎಂದು ಹಿರಿಯ ಅಧಿಕಾರಿಗಳನ್ನು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ