ಆ್ಯಪ್ನಗರ

ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಬಿಜೆಪಿ ಗೆಲುವು

ಬೆಳಗಾವಿ : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ...

Vijaya Karnataka 22 Apr 2019, 5:00 am
ಬೆಳಗಾವಿ : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೇಳಿದರು.
Vijaya Karnataka Web BLG-2104-2-52-21RAJU-1


ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದ 14 ಸ್ಥಾನಗಳಿಗೆ ಮೊದಲ ಹಂತದಲ್ಲಿ ಜರುಗಿದ ಚುನಾವಣೆಯಲ್ಲಿ ಬಿಜೆಪಿಗೆ 8-9 ಸ್ಥಾನಗಳು ಸಿಗುತ್ತವೆ. 2ನೇ ಹಂತದ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಕನಿಷ್ಠ 12 ಸ್ಥಾನಗಳಾದರೂ ದಕ್ಕುತ್ತವೆ. ದೇಶದಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದ್ದು, ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯಗೆ ಅರಳು ಮರಳು: ಸಿದ್ದರಾಮಯ್ಯನವರಿಗೆ ಅರಳು ಮರಳು ಆರಂಭವಾಗಿದೆ. ಈ ಹಿಂದೆ ಸದನದಲ್ಲಿ ಇದು ತಮ್ಮ ಕೊನೆ ಚುನಾವಣೆ ಎಂದು ಘೋಷಣೆ ಮಾಡಿದ್ದರು. ನಂತರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 30 ಸಾವಿರ ಮತಗಳ ಅಂತರದಲ್ಲಿ ಸೋತು, ಬದಾಮಿಯಲ್ಲಿ ಕಡಿಮೆ ಅಂತರದಲ್ಲಿ ಗೆದ್ದು ಮಾನ ಉಳಿಸಿಕೊಂಡರು. ಈಗ ಮತ್ತೆ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಜಗದೀಶ ಶೆಟ್ಟರ್‌ ಹೇಳಿದರು.

ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಮಾತನಾಡಿ, ಅಭಿವೃದ್ಧಿ ಮತ್ತು ಬಲಿಷ್ಠ ಭಾರತದ ನಿರ್ಮಾಣಕ್ಕೆ ತಮಗೆ ಮತ ನೀಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಎಂ.ಬಿ. ಝಿರಲಿ, ರಾಜು ಚಿಕ್ಕನಗೌಡರ್‌ ಮತ್ತಿತರರು ಉಪಸ್ಥಿತರಿದ್ದರು.

ನಾಟಕ ಬಿಟ್ಟು ಸಾಕ್ಷಿ ಕೊಡಲಿ :
ಬಿಜೆಪಿ ಇತರೆ ಶಾಸಕರನ್ನು ಸೆಳೆಯಲು 20 ಕೋಟಿ ರೂ.ಗಳ ಆಮಿಷ ಒಡ್ಡುತ್ತಿದೆ ಎಂದು ಶಾಸಕಿ ಲಕ್ಷ್ಮೇ ಹೆಬ್ಬಾಳಕರ್‌ ಒಳಗೊಂಡು ಕಾಂಗ್ರೆಸ್‌ನ ಇತರೆ ನಾಯಕರು ಆರೋಪಿಸಿರುವ ಬಗ್ಗೆ ಕಿಡಿ ಕಾರಿದ ಅವರು, ಈ ನಾಟಕ ಬಿಟ್ಟು ಮೊದಲು ಸಾಕ್ಷಿ ಕೊಡುವುದನ್ನು ಅವರು ಕಲಿತುಕೊಳ್ಳಲಿ. ಬಿಜೆಪಿಯವರ ಮೇಲೆ ಐಟಿ ರೇಡ್‌ ಆಗಿಲ್ಲವೆಂದು ಬೊಬ್ಬೆ ಹೊಡೆಯುತ್ತಾರೆ. ಸಿದ್ದರಾಮಯ್ಯನವರು ತಾವೇ ಒಂದು ತನಿಖಾ ತಂಡ ಕಟ್ಟಿಕೊಂಡು ನಮ್ಮ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸಲಿ. ಏನಾದರೂ ಇದ್ದರೆ ಕೊಟ್ಟು ಕಳುಹಿಸುತ್ತೇನೆ ಎಂದು ಕುಟುಕಿದರು.

ನಾವು ಯಾವುದೇ ಆಪರೇಶನ್‌ ಕಮಲ ಮಾಡುವುದಿಲ್ಲ. ಆದರೆ ಮೈತ್ರಿ ಸರಕಾರ ತಾನಾಗಿಯೇ ಬಿದ್ದು ಹೋದರೆ ಬಿಜೆಪಿ ತನ್ನ ಹೊಣೆಗಾರಿಕೆಯನ್ನು ನಿಭಾಯಿಸಲಿದೆ. ಶಾಸಕ ರಮೇಶ ಜಾರಕಿಹೊಳಿ ಅಧಿಕೃತವಾಗಿ ಬಿಜೆಪಿ ನಾಯಕರನ್ನು ಸಂಪರ್ಕಿಸಿಲ್ಲ.
-ಜಗದೀಶ ಶೆಟ್ಟರ್‌, ಮಾಜಿ ಸಿಎಂ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ