ಆ್ಯಪ್ನಗರ

ಸಿಎಂ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿ: ರೈತರು ಹಾಗೂ ರೈತ ಮಹಿಳೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಿಂದನೆ ಮಾಡಿದ್ದನ್ನು ಖಂಡಿಸಿ ಬುಧವಾರ ಗ್ರಾಮೀಣ ಬಿಜೆಪಿ ಘಟಕ ವತಿಯಿಂದ ನಗರದ ಚನ್ನಮ್ಮ ...

Vijaya Karnataka 22 Nov 2018, 5:00 am
ಬೆಳಗಾವಿ : ರೈತರು ಹಾಗೂ ರೈತ ಮಹಿಳೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಿಂದನೆ ಮಾಡಿದ್ದನ್ನು ಖಂಡಿಸಿ ಬುಧವಾರ ಗ್ರಾಮೀಣ ಬಿಜೆಪಿ ಘಟಕ ವತಿಯಿಂದ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web BEL-21 LBS 4


ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ಮುಖಂಡರಾದ ರಾಜೇಂದ್ರ ಹರಕುಣಿ, ಚೇತನ ಪಾಟೀಲ, ಧನಂಜಯ ಜಾಧವ, ಮೋಹನ ಅಂಗಡಿ, ನಾಗರಾಜ ಪಾಟೀಲ, ಜಯಶ್ರೀ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ಬತ್ತ ಬಿತ್ತನೆ ಮಾಡುತ್ತಾರೆ. ಆದರೆ, ಉತ್ತರ ಕರ್ನಾಟಕದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಇರುವ ಕುಮಾರಸ್ವಾಮಿ ಏನೇನೂ ಹೇಳಿಕೆ ನೀಡುತ್ತಿದ್ದಾರೆ. ಕಾರ್ಖಾನೆ ಮಾಲೀಕರಿಲ್ಲದೇ ಕಾಟಾಚಾರದ ಸಭೆ ನಡೆಸಿದ್ದಾರೆ. ರೈತರ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು.
- ಸಂಜಯ ಪಾಟೀಲ, ಮಾಜಿ ಶಾಸಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ