ಆ್ಯಪ್ನಗರ

ಲಂಚ ಸ್ವೀಕಾರ: ಕಾರ್ಮಿಕ ಅಧಿಕಾರಿಗಳು ಎಸಿಬಿ ಬಲೆಗೆ

ಬೆಳಗಾವಿ: ಹೋಟೆಲ್‌ ಮಾಲೀಕನಿಂದ ಲಂಚ ಸ್ವೀಕರಿಸುತ್ತಿದ್ದ ಕಾರ್ಮಿಕ ಅಧಿಕಾರಿಗಳಿಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ...

Vijaya Karnataka 8 Jul 2018, 5:00 am
ಬೆಳಗಾವಿ: ಹೋಟೆಲ್‌ ಮಾಲೀಕನಿಂದ ಲಂಚ ಸ್ವೀಕರಿಸುತ್ತಿದ್ದ ಕಾರ್ಮಿಕ ಅಧಿಕಾರಿಗಳಿಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
Vijaya Karnataka Web BLG-0707-2-52-7MAHESH12


ಜಿಲ್ಲಾ ಕಾರ್ಮಿಕ ಇಲಾಖೆ ಹಿರಿಯ ನಿರೀಕ್ಷಕ ಭೀಮಪ್ಪ ಜಾಧವ ಮತ್ತು ದ್ವಿತೀಯ ದರ್ಜೆ ಸಹಾಯಕ ಯೋಗೀಂದ್ರ ರಾಥೋಡ ಬಂಧಿತರು.

ಶಹಾಪುರದ ಭಾರತ ನಗರದ ನಿವಾಸಿ ರವಿ ಕೇಶವ ಶಿಂಧೆ ನಡೆಸುತ್ತಿರುವ ಹೋಟೆಲ್‌ಗೆ ಆಗಮಿಸಿದ್ದ ಕಾರ್ಮಿಕ ಅಧಿಕಾರಿಗಳು ದಾಖಲಾತಿ ಪರಿಶೀಲನೆ ಮಾಡಿ ಪ್ರತಿ ತಿಂಗಳು 1000ರೂ. ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಕಳೆದ ಜನವರಿಯಿಂದ ಇಲ್ಲಿಯವರೆಗಿನ ಬಾಕಿ 6000 ರೂ. ಕೂಡ ತಕ್ಷಣ ಪಾವತಿಸಬೇಕು ಎಂದು ಶಿಂಧೆ ಅವರನ್ನು ಒತ್ತಾಯಿಸುತ್ತಿದ್ದರು. ಒಟ್ಟು ಬೇಡಿಕೆಯ ಮೊತ್ತದ ಪೈಕಿ 3000 ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಎಸಿಬಿ ಇನ್ಸ್‌ಸ್ಪೆಕ್ಟರ್‌ ವಿಶಾಲ ಕಬ್ಬೂರಿ ಸೇರಿದಂತೆ ಇತರರು ದಾಳಿ ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ