ಆ್ಯಪ್ನಗರ

ಅಪಾಯಕ್ಕೆ ಆಹ್ವಾನಿಸುತ್ತಿರುವ ತಡೆಗೋಡೆಯಿಲ್ಲದ ಸೇತುವೆ

ಬೋರಗಾಂವ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಯಕಲ್ಪ ಪ್ರಶಸ್ತಿಗೆ ಭಾಜನವಾದ ಬೇಡಕಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ...

Vijaya Karnataka 25 Jun 2018, 5:00 am
ಬೋರಗಾಂವ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಯಕಲ್ಪ ಪ್ರಶಸ್ತಿಗೆ ಭಾಜನವಾದ ಬೇಡಕಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲಿನ ಸೇತುವೆ ತಡೆಗೋಡೆಗಳೇ ಇಲ್ಲದ ಅನಾರೋಗ್ಯಕರ ಸ್ಥಿತಿಯಲ್ಲಿರುವುದು ದುರಂತ.
Vijaya Karnataka Web BEL-24ICH2


ಬೇಡಕಿಹಾಳ-ಭೋಜ ರಸ್ತೆಯಲ್ಲಿ ಗದ್ದೆಗಳಿಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಲು 8 ವರ್ಷಗಳ ಹಿಂದೆ ರಾಮಕುಂಡ ಹಳ್ಳಕ್ಕೆ ನಿರ್ಮಿಸಲಾಗಿದ್ದ ಮಿನಿ ಸೇತುವೆಗೆ ಇದುವರೆಗೂ ಸಂರಕ್ಷಣಾ ಗೋಡೆ ಕಟ್ಟದಿರುವುದು ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ರಾತ್ರಿ ವೇಳೆ ಈ ಸೇತುವೆ ಮೇಲೆ ಸಂಚರಿಸುವವರು ಸ್ಪಲ್ಪ ಆಯ ತಪ್ಪಿದರೂ ವಾಹನ ಸಮೇತ ಹಳ್ಳಕ್ಕೇ ಬೀಳುವುದಂತೂ ಗ್ಯಾರಂಟಿ. ಹಲವು ಬಾರಿ ಇಂತಹ ದುರ್ಘಟನೆಗಳು ಸಂಭವಿಸಿರುವುದು ಎಚ್ಚರಿಕೆಯ ಗಂಟೆಯಾಗಿದೆ. ಈ ಹಿಂದೆ ಸೇತುವೆಗೆ ತಡೆಗೋಡೆ ನಿರ್ಮಿಸಿ, ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಜಿಪಂ ಸದಸ್ಯರು ಹಾಗೂ ನಿಪ್ಪಾಣಿ ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಮನವಿಗೆ ಸುತಾರಾಂ ಸ್ಪಂದಿಸುತ್ತಿಲ್ಲ ಎನ್ನುವ ಗ್ರಾಮಸ್ಥರು ಮುಂದಿನ ದಿನಗಳಲ್ಲಿ ಸೇತುವೆಗೆ ತಡೆಗೋಡೆ ನಿರ್ಮಿಸದಿದ್ದರೆ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ