ಆ್ಯಪ್ನಗರ

ಲಿಖಿತ ಒಪ್ಪಿಗೆ ನೀಡಿದರೆ ನವಗ್ರಾಮ ನಿರ್ಮಾಣ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

ಒಂದು ಮನೆ ನಿರ್ಮಾಣಕ್ಕೆ ಒಟ್ಟಾರೆ ಐದು ಲಕ್ಷ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲ ಕಂತಿನಲ್ಲಿ ಅಡಿಪಾಯಕ್ಕೆ ನೀಡುವ ಒಂದು ಲಕ್ಷ ರೂಪಾಯಿ ಬಳಸಿಕೊಂಡು ಕೆಲಸ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

Vijaya Karnataka Web 10 Sep 2019, 4:49 pm
ಬೆಳಗಾವಿ: ಸ್ಥಳಾಂತರಕ್ಕೆ ಸಿದ್ಧವಿರುವುದಾಗಿ ನದಿತೀರದ ಗ್ರಾಮಸ್ಥರು ಲಿಖಿತವಾಗಿ ತಿಳಿಸಿದರೆ ಇಡೀ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸಂಪೂರ್ಣ ಸ್ಥಳಾಂತರಿಸಿ ನವಗ್ರಾಮಗಳಲ್ಲಿ ಶಾಲೆ, ಆಸ್ಪತ್ರೆ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಪಿಹೊಳಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಸುರೇಬಾನ ಗ್ರಾಮದ ಪರಿಹಾರ ಕೇಂದ್ರದಲ್ಲಿ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರವಾಹದಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಲು ಒಂದು ವಾರದೊಳಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ಅಡಿಪಾಯ ಹಾಕಲು ಮುಂದಾಗುವ ಕುಟುಂಬಗಳಿಗೆ ವಾರದೊಳಗೆ ಒಂದು ಲಕ್ಷ ರೂಪಾಯಿ ಮೊದಲ ಕಂತು ಒಂದು ವಾರದೊಳಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಅದೇ ರೀತಿ ಮನೆಗಳ ದುರಸ್ತಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ತಾತ್ಕಾಲಿಕವಾಗಿ ಸಂತ್ರಸ್ತರಿಗೆ ಶೆಡ್ ನಿರ್ಮಾಣ ಕಾಮಗಾರಿಯನ್ನು ಮೂರ್ನಾಲ್ಕು ದಿನಗಳಲ್ಲಿ ಆರಂಭಿಸಬೇಕು ಎಂದು ಯಡಿಯೂರಪ್ಪ ಸೂಚನೆ ನೀಡಿದರು.

ವ್ಯಾಪಾರಸ್ಥರಿಗೂ ಹತ್ತು ಸಾವಿರ ಪರಿಹಾರ

ಪ್ರವಾಹದಿಂದ ಹಾನಿಗೊಳಗಾದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಕೂಡ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಬೆಳೆನಾಶಕ್ಕೆ ಸೂಕ್ತ ಪರಿಹಾರ ನೀಡಲು ಕೇಂದ್ರದಿಂದ ಹೆಚ್ವಿನ ಪರಿಹಾರ ನೀಡಲು ಪ್ರಯತ್ನಿಸಲಾಗುತ್ತಿದ್ದು, ನೇಕಾರ ಕುಟುಂಬಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ