ಆ್ಯಪ್ನಗರ

ನಕ್ಸಲ್ ದಾಳಿಗೆ ಬೆಳಗಾವಿ ಯೋಧ ಹುತಾತ್ಮ

ಬಿ.ಎಸ್.ಎಫ್ ಯೋಧ ರಾಹುಲ ವಸಂತ ಶಿಂಧೆ ಭಾನುವಾರ ನಸುಕಿನ ಜಾವ ಪಶ್ಚಿಮ ಬಂಗಾಳದಲ್ಲಿ ನೈಟ್ ಡ್ಯೂಟಿ ಮುಗಿಸಿ ತಮ್ಮ ಹೆಡ್ ಕ್ವಾರ್ಟರ್ಸ್ ನತ್ತ ಮರಳುತ್ತಿದ್ದ ಸಂದರ್ಭದಲ್ಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ.

Vijaya Karnataka Web 17 Mar 2019, 3:38 pm
ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಮೂಲದ ಯೋಧ ಹುತಾತ್ಮನಾಗಿದ್ದಾನೆ.
Vijaya Karnataka Web Soldier.


ಖಾನಾಪುರ ತಾಲೂಕಿನ ನಾವಗಾ ಗ್ರಾಮದ ನಿವಾಸಿ, ಬಿ.ಎಸ್.ಎಫ್ ಯೋಧ ರಾಹುಲ ವಸಂತ ಶಿಂಧೆ ಭಾನುವಾರ ನಸುಕಿನ ಜಾವ ಪಶ್ಚಿಮ ಬಂಗಾಳದಲ್ಲಿ ನೈಟ್ ಡ್ಯೂಟಿ ಮುಗಿಸಿ ತಮ್ಮ ಹೆಡ್ ಕ್ವಾರ್ಟರ್ಸ್ ನತ್ತ ಮರಳುತ್ತಿದ್ದ ಸಂದರ್ಭದಲ್ಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡೇಟಿಗೆ ಸಿಲುಕಿದ ಯೋಧ ರಾಹುಲ ವಸಂತ ಶಿಂಧೆ ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತರಿಗೆ ತಂದೆ, ತಾಯಿ, ಓರ್ವ ಸಹೋದರ, ಸಹೋದರಿ ಇದ್ದಾರೆ. ಮೃತರ ಪಾರ್ಥೀವ ಶರೀರ ಗೋವಾ ಮಾರ್ಗವಾಗಿ ಸೋಮವಾರ ಸ್ವಗ್ರಾಮಕ್ಕೆ ಆಗಮಿಸಬಹುದೆಂದು ನಿರೀಕ್ಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ