ಆ್ಯಪ್ನಗರ

ಕುಟ್ಟಲವಾಡಿಗೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಪ್ರತಿಭಟನೆ

ಬೆಳಗಾವಿ: ತಾಲೂಕಿನ ಕುಟ್ಟಲವಾಡಿಗೆ ಬಸ್‌ ಸೌಲಭ್ಯ ...

Vijaya Karnataka 18 Jan 2020, 5:00 am
ಬೆಳಗಾವಿ : ತಾಲೂಕಿನ ಕುಟ್ಟಲವಾಡಿಗೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶುಕ್ರವಾರ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 17LBS3_53
ಬೆಳಗಾವಿ ತಾಲೂಕು ಕುಟ್ಟಲವಾಡಿಗೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿದರು.


ಗ್ರಾಮಕ್ಕೆ ಕೆಲ ದಿನಗಳ ಹಿಂದೆ ಬಸ್‌ ಸೌಲಭ್ಯವಿತ್ತು. ಆದರೆ, ರಸ್ತೆ ಕಾಮಗಾರಿ ಆರಂಭವಾಗಿದ್ದರಿಂದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಬಸ್‌ ಸ್ಥಗಿತಗೊಳಿಸಿದ್ದಾರೆ. ಇದರಿಂದ ಗ್ರಾಮಸ್ಥರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಬಸ್‌ ಪುನರಾರಂಭಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರಣ ಕೂಡಲೇ ಬಸ್‌ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿಆಗ್ರಹಿಸಿದ್ದಾರೆ.

ಗ್ರಾಮಸ್ಥರಾದ ಕಲಾವತಿ ನಾಯಿಕ, ಸರೋಜಾ ದೇಸಾಯಿ, ಕಾಂಚನ ದೇಸಾಯಿ, ಶೋಭಾ ದೇಸಾಯಿ, ಶೈಲಾ ಹರಿಜನ, ರಾಜು ಪಾಟೀಲ, ಸವಿತಾ ದೇಸಾಯಿ, ಸುರೇಖಾ ದೇಸಾಯಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ