ಆ್ಯಪ್ನಗರ

ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಬೆಳಗಾವಿ: ಗಣೇಶಪುರದ ನಿವಾಸಿ, ಉದ್ಯಮಿ ಶೈಲೇಶ್‌ ಜೋಶಿ (43) ಸೋಮವಾರ ಬೆಳಗಿನಜಾವ ಮನೆಯಲ್ಲಿ ಗುಂಡು ಹಾರಿಸಿಕೊಂಡು ...

Vijaya Karnataka 5 Jun 2018, 5:00 am
ಬೆಳಗಾವಿ: ಗಣೇಶಪುರದ ನಿವಾಸಿ, ಉದ್ಯಮಿ ಶೈಲೇಶ್‌ ಜೋಶಿ (43) ಸೋಮವಾರ ಬೆಳಗಿನಜಾವ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web BEL-4BGM21


ಅಮೃತ್‌ ಫಾರ್ಮಾಸಿಟಿಕಲ್ಸ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶೈಲೇಶ್‌ ಅವರು ಹೊಟ್ಟೆ ನೋವಿನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟಿದ್ದಾರೆ. ಹಲವು ವರ್ಷಗಳಿಂದ ಅವರು ಯಕೃತ್ತಿನ ತೊಂದರೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಪಿಸ್ತೂಲ್‌ ಸದ್ದು ಕೇಳಿದ ತಕ್ಷಣ ಎಚ್ಚರಗೊಂಡ ಮನೆಯ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕ್ಯಾಂಪ್‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸೋಮವಾರ ಬೆಳಗಿನಜಾವ ಸುಮಾರು 2 ಗಂಟೆಯಷ್ಟೊತ್ತಿಗೆ ಮನೆಯ ಹಾಲ್‌ನಲ್ಲಿ ಪರವಾನಗಿ ಹೊಂದಿದ ಪಿಸ್ತೂಲ್‌ನಿಂದ ಹೊಟ್ಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೈಲೇಶ್‌ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಅವರು ತಮ್ಮ ಕಂಪೆನಿಯ ವಹಿವಾಟನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸುವ ಆಕಾಂಕ್ಷೆ ಹೊಂದಿದ್ದರು ಎನ್ನಲಾಗಿದೆ.

'ಐ ಲವ್‌ ಮೈ ಡಾಟರ್ಸ್‌': ಶೈಲೇಶ್‌ ಜೋಶಿ ಅವರು ಆತ್ಮಹತ್ಯೆಗೂ ಮುನ್ನ ಇಂಗ್ಲಿಷ್‌ನಲ್ಲಿ ಪತ್ರ ಬರೆದಿಟ್ಟಿದ್ದಾರೆ. 'ಹೊಟ್ಟೆ ನೋವಿನಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಮಕ್ಕಳನ್ನು ಪ್ರೀತಿಸುತ್ತೇನೆ (ಐ ಲವ್‌ ಮೈ ಡಾಟರ್ಸ್‌). ನನ್ನನ್ನು ಕ್ಷಮಿಸಿಬಿಡಿ. ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಬೇಡಿ' ಎಂದು ಪತ್ರದಲ್ಲಿ ಬರೆದಿದ್ದಾರೆ ಎಂದು ಕ್ಯಾಂಪ್‌ ಠಾಣೆ ಇನ್‌ಸ್ಪೆಕ್ಟರ್‌ 'ವಿಕ'ಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ