ಚಿಕ್ಕೋಡಿ: ನಾನು ಹೆಂಡತಿಯ ಜೊತೆಗೆ ಮುನಿಸಿಕೊಂಡವನಲ್ಲ ಇನ್ನು ಸಿಎಂ ಬಿಎಸ್ ಯಡಿಯೂರಪ್ಪ ಜೊತೆಗೆ ಕೋಪ ಮಾಡಿಕೊಳ್ಳಲು ಸಾಧ್ಯನಾ ಎಂದು ಹೇಳುವ ಮೂಲಕ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಧಾನವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಯಾವುದೇ ರೀತಿಯಲ್ಲಿ ಬೇಸರವಿಲ್ಲ. ರಾಜ್ಯದಲ್ಲಿ ಬಿಜೆಪಿ ಸರಕಾರ ಚೆನ್ನಾಗಿ ನಡೆಯುತ್ತಿದೆ. ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಉತ್ತಮ ರೀತಿಯ ಆಡಳಿತ ನೀಡುತ್ತಿದ್ದಾರೆ.
ನಾನು 13 ವರ್ಷಗಳ ಕಾಲ ಸಚಿವನಾಗಿದ್ದೆ ಹೀಗಾಗಿ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಿದರೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಸಚಿವ ಸ್ಥಾನ ನೀಡದೇ ಇದ್ದರೂ ಕ್ಷೇತ್ರದ ಅಭಿವೃದ್ದಿಯನ್ನು ಮಾಡುತ್ತೇನೆ ಎಂದರು.
ಉಮೇಶ್ ಕತ್ತಿಗೆ ಕೈ ತಪ್ಪಿದ ಸಚಿವ ಸ್ಥಾನ , ಕಾರಣ ಬಿಚ್ಚಿಟ್ಟ ಬಿಎಸ್ವೈ
ಸಂಪುಟ ವಿಸ್ತರಣೆಯಲ್ಲಿ ಉಮೇಶ್ ಕತ್ತಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಸಿಎಂ ಬಿಎಸ್ವೈ ಕೇವಲ ನೂತನ ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡುವ ಮೂಲಕ ಮೂಲ ಬಿಜೆಪಿಗರಲ್ಲಿ ನಿರಾಸೆ ಮೂಡಿಸಿದ್ದಾರೆ.
ಮಿಸ್ಟರ್ ಮೋದಿ, ಮುಂದಿನ ಚುನಾವಣೆವರೆಗೆ ಕಾದುನೋಡಿ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!
ಸಂಪುಟ ವಿಸ್ತರಣೆಯ ಬಳಿಕ ಉಮೇಶ್ ಕತ್ತಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಕತ್ತಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎನ್ನಲಾಗಿದೆ.
ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಯಾವುದೇ ರೀತಿಯಲ್ಲಿ ಬೇಸರವಿಲ್ಲ. ರಾಜ್ಯದಲ್ಲಿ ಬಿಜೆಪಿ ಸರಕಾರ ಚೆನ್ನಾಗಿ ನಡೆಯುತ್ತಿದೆ. ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಉತ್ತಮ ರೀತಿಯ ಆಡಳಿತ ನೀಡುತ್ತಿದ್ದಾರೆ.
ನಾನು 13 ವರ್ಷಗಳ ಕಾಲ ಸಚಿವನಾಗಿದ್ದೆ ಹೀಗಾಗಿ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಿದರೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಸಚಿವ ಸ್ಥಾನ ನೀಡದೇ ಇದ್ದರೂ ಕ್ಷೇತ್ರದ ಅಭಿವೃದ್ದಿಯನ್ನು ಮಾಡುತ್ತೇನೆ ಎಂದರು.
ಉಮೇಶ್ ಕತ್ತಿಗೆ ಕೈ ತಪ್ಪಿದ ಸಚಿವ ಸ್ಥಾನ , ಕಾರಣ ಬಿಚ್ಚಿಟ್ಟ ಬಿಎಸ್ವೈ
ಸಂಪುಟ ವಿಸ್ತರಣೆಯಲ್ಲಿ ಉಮೇಶ್ ಕತ್ತಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಸಿಎಂ ಬಿಎಸ್ವೈ ಕೇವಲ ನೂತನ ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡುವ ಮೂಲಕ ಮೂಲ ಬಿಜೆಪಿಗರಲ್ಲಿ ನಿರಾಸೆ ಮೂಡಿಸಿದ್ದಾರೆ.
ಮಿಸ್ಟರ್ ಮೋದಿ, ಮುಂದಿನ ಚುನಾವಣೆವರೆಗೆ ಕಾದುನೋಡಿ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!
ಸಂಪುಟ ವಿಸ್ತರಣೆಯ ಬಳಿಕ ಉಮೇಶ್ ಕತ್ತಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಕತ್ತಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎನ್ನಲಾಗಿದೆ.