ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಾರ್ಚ್- ಏಪ್ರಿಲ್ನಲ್ಲಿ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗುತ್ತದೆ. ಸಚಿವ ಸ್ಥಾನ ತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ್ದು, ಈಗ ಚರ್ಚಿತ ವಿಷಯವಾಗಿದೆ.
ಬೆಳಗಾವಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಾವು ಅಂದುಕೊಂಡಂತೆ ಸಚಿವ ಸಂಪುಟ ವಿಸ್ತರಣೆ ಆಗುತ್ತಿದೆ. ಇಂದು ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದವರು ಉತ್ಸಾಹ ಕಳೆದುಕೊಳ್ಳದೇ ಮಾರ್ಚ್ ಅಥವಾ ಎಪ್ರಿಲ್ ನಲ್ಲಿ ಸಚಿವ ಸಂಪುಟದ ಪುನರ್ ರಚನೆ ಆಗುತ್ತದೆ. ಆ ಸಮಯದಲ್ಲಿ ಅವಕಾಶ ಸಿಗಲಿದೆ. ಹಾಗಾಗಿ ಎಲ್ಲರೂ ಸಿಎಂ ಯಡಿಯೂರಪ್ಪ ಅವರ ಕೈಬಲಪಡಿಸಿ, ಮುಂದಿನ ಅವಧಿಯಲ್ಲಿ ಉತ್ತಮ ಸರಕಾರ ನೀಡಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಲಬುರಗಿಯಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ ಮಾಲೀಕಯ್ಯ ಗುತ್ತೇದಾರಗೂ ಸಚಿವ ಸ್ಥಾನ ಸಿಗಬೇಕಿದೆ. ಮಾಲೀಕಯ್ಯ ಗುತ್ತೆದಾರ ನನಗಿಂತ ಬಲಿಷ್ಠರಾಗಿದ್ದಾರೆ. ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಬೇಕು. ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಾಗಿದೆ. ಎಚ್.ವಿಶ್ವನಾಥ ಸಚಿವರಾಗಲು ಕಾನೂನು ಕಂಟಕವಿದೆ. ನಾಗೇಶರನ್ನು ಸಚಿವ ಸ್ಥಾನದಿಂದ ಕೈ ಬಿಡುತ್ತಿಲ್ಲ. ಸರ್ಕಾರ ಬರಲು ಯೋಗೇಶ್ವರ್ ಪ್ರಮುಖ ಮಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಕ್ಕೆ ಬಹಳ ಸಂತೋಷವಾಗಿದೆ. ಮುನಿರತ್ನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಜತೆಗೆ ಎಚ್. ವಿಶ್ವನಾಥ, ಮಹೇಶ ಕುಮಟಳ್ಳಿ, ಅವರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು. ಆದ್ರೆ ಜಾರಕಿಹೊಳಿ ಹೇಳಿರುವ ಯಾರೊಬ್ಬರಿಗೂ ಬಿಎಸ್ವೈ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ.
ಬೆಳಗಾವಿಯಲ್ಲಿ ಜ.17 ರಂದು ಜನ ಸೇವಕ ಸಮಾವೇಶ ಸಮಾರೋಪ; ಸಚಿವ ರಮೇಶ್ ಜಾರಕಿಹೊಳಿ ಪರಿಶೀಲನೆ
ಇನ್ನು ಯಡಿಯೂರಪ್ಪ ವಿರುದ್ಧ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ರಮೇಶ ಜಾರಕಿಹೊಳಿ, ವಿಶ್ವನಾಥ ಹಿರಿಯರು. ಅವರು ಮಾತನಾಡುವುದು ಆಶೀರ್ವಾದ ಅಂದುಕೊಳ್ಳೋಣ. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ಆಗಲಿ. ಇದಾದ ಮೇಲೆ ತಾ.ಪಂ., ಜಿ.ಪಂ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಂಪುಟ ಪುನಾರಚನೆ ಆಗಲಿದೆ ಎಂದರು.
ಸೋತ ಯೋಗೀಶ್ವರ್ ಗೆ ಯಾಕೆ ಮಂತ್ರಿಗಿರಿ: ಶಾಸಕ ತಿಪ್ಪಾರೆಡ್ಡಿ ಆಕ್ರೋಶ
ಬೆಂಗಳೂರು ಮತ್ತು ಬೆಳಗಾವಿ ಹೆಚ್ಚಿನ ಸಚಿವ ಸ್ಥಾನ ಸಿಗುತ್ತಿರುವುದಕ್ಕೆ ರೇಣುಕಾಚಾರ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರಕ್ರಿಯಿಸಿ ಸಚಿವ ಜಾರಕಿಹೊಳಿ ಅವರು, ಸಂದರ್ಭಕ್ಕೆ ಅನುಗುಣವಾಗಿ ಆಗಿದೆ. ಹೊಸ ಸರಕಾರ ರಚನೆ ಆಗಿಲ್ಲ. ಅದನ್ನು ಸಿಎಂ ಅವರು ಸರಿಪಡಿಸುತ್ತಾರೆ ಎಂದು ಇದೇ ವೇಳೆ ಹೇಳಿದರು.
ಬೆಳಗಾವಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಾವು ಅಂದುಕೊಂಡಂತೆ ಸಚಿವ ಸಂಪುಟ ವಿಸ್ತರಣೆ ಆಗುತ್ತಿದೆ. ಇಂದು ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದವರು ಉತ್ಸಾಹ ಕಳೆದುಕೊಳ್ಳದೇ ಮಾರ್ಚ್ ಅಥವಾ ಎಪ್ರಿಲ್ ನಲ್ಲಿ ಸಚಿವ ಸಂಪುಟದ ಪುನರ್ ರಚನೆ ಆಗುತ್ತದೆ. ಆ ಸಮಯದಲ್ಲಿ ಅವಕಾಶ ಸಿಗಲಿದೆ. ಹಾಗಾಗಿ ಎಲ್ಲರೂ ಸಿಎಂ ಯಡಿಯೂರಪ್ಪ ಅವರ ಕೈಬಲಪಡಿಸಿ, ಮುಂದಿನ ಅವಧಿಯಲ್ಲಿ ಉತ್ತಮ ಸರಕಾರ ನೀಡಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಲಬುರಗಿಯಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ ಮಾಲೀಕಯ್ಯ ಗುತ್ತೇದಾರಗೂ ಸಚಿವ ಸ್ಥಾನ ಸಿಗಬೇಕಿದೆ. ಮಾಲೀಕಯ್ಯ ಗುತ್ತೆದಾರ ನನಗಿಂತ ಬಲಿಷ್ಠರಾಗಿದ್ದಾರೆ. ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಬೇಕು. ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಾಗಿದೆ. ಎಚ್.ವಿಶ್ವನಾಥ ಸಚಿವರಾಗಲು ಕಾನೂನು ಕಂಟಕವಿದೆ. ನಾಗೇಶರನ್ನು ಸಚಿವ ಸ್ಥಾನದಿಂದ ಕೈ ಬಿಡುತ್ತಿಲ್ಲ. ಸರ್ಕಾರ ಬರಲು ಯೋಗೇಶ್ವರ್ ಪ್ರಮುಖ ಮಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಕ್ಕೆ ಬಹಳ ಸಂತೋಷವಾಗಿದೆ. ಮುನಿರತ್ನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಜತೆಗೆ ಎಚ್. ವಿಶ್ವನಾಥ, ಮಹೇಶ ಕುಮಟಳ್ಳಿ, ಅವರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು. ಆದ್ರೆ ಜಾರಕಿಹೊಳಿ ಹೇಳಿರುವ ಯಾರೊಬ್ಬರಿಗೂ ಬಿಎಸ್ವೈ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ.
ಬೆಳಗಾವಿಯಲ್ಲಿ ಜ.17 ರಂದು ಜನ ಸೇವಕ ಸಮಾವೇಶ ಸಮಾರೋಪ; ಸಚಿವ ರಮೇಶ್ ಜಾರಕಿಹೊಳಿ ಪರಿಶೀಲನೆ
ಇನ್ನು ಯಡಿಯೂರಪ್ಪ ವಿರುದ್ಧ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ರಮೇಶ ಜಾರಕಿಹೊಳಿ, ವಿಶ್ವನಾಥ ಹಿರಿಯರು. ಅವರು ಮಾತನಾಡುವುದು ಆಶೀರ್ವಾದ ಅಂದುಕೊಳ್ಳೋಣ. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ಆಗಲಿ. ಇದಾದ ಮೇಲೆ ತಾ.ಪಂ., ಜಿ.ಪಂ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಂಪುಟ ಪುನಾರಚನೆ ಆಗಲಿದೆ ಎಂದರು.
ಸೋತ ಯೋಗೀಶ್ವರ್ ಗೆ ಯಾಕೆ ಮಂತ್ರಿಗಿರಿ: ಶಾಸಕ ತಿಪ್ಪಾರೆಡ್ಡಿ ಆಕ್ರೋಶ
ಬೆಂಗಳೂರು ಮತ್ತು ಬೆಳಗಾವಿ ಹೆಚ್ಚಿನ ಸಚಿವ ಸ್ಥಾನ ಸಿಗುತ್ತಿರುವುದಕ್ಕೆ ರೇಣುಕಾಚಾರ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರಕ್ರಿಯಿಸಿ ಸಚಿವ ಜಾರಕಿಹೊಳಿ ಅವರು, ಸಂದರ್ಭಕ್ಕೆ ಅನುಗುಣವಾಗಿ ಆಗಿದೆ. ಹೊಸ ಸರಕಾರ ರಚನೆ ಆಗಿಲ್ಲ. ಅದನ್ನು ಸಿಎಂ ಅವರು ಸರಿಪಡಿಸುತ್ತಾರೆ ಎಂದು ಇದೇ ವೇಳೆ ಹೇಳಿದರು.