ಆ್ಯಪ್ನಗರ

ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ ಸರಕಾರಿ ಸೌಲಭ್ಯ ರದ್ದಾಗಲಿ

ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಡಿಎಂ...

Vijaya Karnataka 25 Jul 2018, 5:00 am
ರಾಯಬಾಗ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಣಕ್ಕೆ ಸರಕಾರ ಕಟ್ಟುನಿಟ್ಟಿನ ಆದೇಶ ಜಾರಿಗೆ ತರಬೇಕು. ಹೆಚ್ಚು ಮಕ್ಕಳನ್ನು ಹೆರುವ ಕುಟುಂಬಗಳಿಗೆ ಸರಕಾರದ ಸೌಲಭ್ಯಗಳನ್ನು ಕಡಿತಗೊಳಿಸಬೇಕು ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
Vijaya Karnataka Web BEL-24RAIBAG1PHOTO


ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದ ಜನರಿಗೆ ಕುಟುಂಬ ಯೋಜನೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಕುಡಚಿ ಶಾಸಕ ಪಿ.ರಾಜೀವ ಮಾತನಾಡಿ, ಸ್ವಾತಂತ್ರ ಬಂದ ಸಂದರ್ಭದಲ್ಲಿ ದೇಶದಲ್ಲಿ 35 ಕೋಟಿ ಜನಸಂಖ್ಯೆ ಇತ್ತು. ಆದರೆ ಇಂದು 100 ಕೋಟಿಯನ್ನು ಮೀರಿದೆ. ಇದೇ ರೀತಿ ಜನಸಂಖ್ಯೆ ಬೆಳೆಯುತ್ತಾ ಹೋದರೆ ಮುಂಬರುವ ದಿನಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಶಾಲಾ ಮಟ್ಟದಲ್ಲೇ ಜನಸಂಖ್ಯೆ ನಿಯಂತ್ರಣದ ಬಗ್ಗೆ ತಿಳಿವಳಿಕೆ ನೀಡಬೇಕು. ಹೆಣ್ಣು, ಗಂಡೆಂಬ ಭೇದ ತೊರೆದು ಇಬ್ಬರೂ ಸರಿಸಮಾನವೆಂಬ ಭಾವನೆಯನ್ನು ಜನರಲ್ಲಿ ಮೂಡಿಸಬೇಕಿದೆ ಎಂದರು.

ಆರೋಗ್ಯ ಶಿಕ್ಷ ಣಾಧಿಕಾರಿ ವಿಜಯಕುಮಾರ ಹತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಅಧ್ಯಕ್ಷೆ ಸುಜಾತಾ ಪಾಟೀಲ ಅಧ್ಯಕ್ಷ ತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಎಸ್‌. ಕೊಪ್ಪದ, ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಆರ್‌.ಎಚ್‌. ರಂಗಣ್ಣವರ, ಬಿಇಒ ಸಿ.ಆರ್‌. ಓಣಿ, ಡಾ.ಎಸ್‌.ಎಸ್‌. ಬಾನೆ, ಸದಾಶಿವ ಘೋರ್ಪಡೆ, ಗೋಪಾಲ ಕೊಚೇರಿ ಮತ್ತಿತರರು ಉಪಸ್ಥಿತರಿದ್ದರು.

ಬೆಳಗ್ಗೆ ಹಳೇ ಪೊಲೀಸ್‌ ಠಾಣೆಯಿಂದ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 'ಸಾರ್ಥಕತೆಯ ನಾಳೆಯ ಜೀವನಕ್ಕಾಗಿ ಕುಟುಂಬ ಯೋಜನೆಗಳ ಬಳಕೆ' ಘೋಷಣೆಯೊಂದಿಗೆ ಜಾಥಾ ಕಾರ್ಯಕ್ರಮ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ