ಆ್ಯಪ್ನಗರ

ಕಾರ್‌- ಬೈಕ್‌ ಡಿಕ್ಕಿ; ಓರ್ವ ಸಾವು

ಖಾನಾಪುರ ತಾಲೂಕಿನ ಪ್ರಭು ನಗರದ ಹತ್ತಿರ ಭಾನುವಾರ ರಾತ್ರಿ ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿದ್ದಾರೆ...

Vijaya Karnataka 27 Feb 2019, 5:00 am
ಬೆಳಗಾವಿ: ಖಾನಾಪುರ ತಾಲೂಕಿನ ಪ್ರಭು ನಗರದ ಹತ್ತಿರ ಭಾನುವಾರ ರಾತ್ರಿ ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿದ್ದಾರೆ.
Vijaya Karnataka Web car bike collide one death
ಕಾರ್‌- ಬೈಕ್‌ ಡಿಕ್ಕಿ; ಓರ್ವ ಸಾವು


ಬೆಳಗಾವಿಯ ಸದಾಶಿವ ನಗರದ ಅಮರ ಸಂಭಾಜಿ ಕಡಲೆಕರ(27) ಮೃತ ವ್ಯಕ್ತಿ. ಹಿಂಬದಿ ಸವಾರ ಬೈಲಹೊಂಗಲ ಪಟ್ಟಣದ ಚನ್ನಮ್ಮ ನಗರದ ಮಂಜುನಾಥ ದೇವೆಂದ್ರ ಬಾಗೇವಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾನಾಪುರ ಕಡೆಯಿಂದ ಬೆಳಗಾವಿ ನಗರದ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೆಳಗಾವಿ ನಗರದಿಂದ ಖಾನಾಪುರ ಪಟ್ಟಣದ ಕಡೆಗೆ ಹೊರಟಿದ್ದ ದ್ವಿಚಕ್ರ ವಾಹನ ಮಧ್ಯೆ ಅಪಘಾತ ಸಂಭವಿಸಿದೆ. ಈ ವೇಳೆ ದ್ವಿಚಕ್ರ ವಾಹನದ ಮೇಲಿದ್ದ ಅಮರ್‌ಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ. ಮಂಜುನಾಥಗೆ ಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ