ಆ್ಯಪ್ನಗರ

ಬೈಕ್‌ಗೆ ಕಾರು ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ವ್ಯಕ್ತಿ ಸ್ಥಳದಲ್ಲೇ ಸಾವು ಎಂಕೆ...

Vijaya Karnataka 29 May 2018, 5:00 am
ಎಂ.ಕೆ.ಹುಬ್ಬಳ್ಳಿ: ಸಮೀಪದ ದಾಸ್ತಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಕಾರ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Vijaya Karnataka Web car collides with bike death on the spot
ಬೈಕ್‌ಗೆ ಕಾರು ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು


ಚನ್ನಮ್ಮನ ಕಿತ್ತೂರು ಪಟ್ಟಣದ ನಿವಾಸಿ ದಿನೇಶ ನಾರಾಯಣ ಗೊಂದಳಿ (24) ಮೃತ ಯುವಕ.

ದಾಸ್ತಿಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದ್ದು, ಸರ್ವಿಸ್‌ ರಸ್ತೆ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ತೆರಳುವಲ್ಲಿ ಸ್ಪೀಡ್‌ ಬ್ರೇಕರ್‌ ನಿರ್ಮಿಸಲಾಗಿದೆ. ಇದೇ ಮಾರ್ಗದಲ್ಲಿ ಕಿತ್ತೂರಿಗೆ ತೆರಳುತ್ತಿದ್ದ ದಿನೇಶ ನಾರಾಯಣ ಗೊಂದಳಿ ಸ್ಪೀಡ್‌ ಬ್ರೇಕರ್‌ ಇರುವುದರಿಂದ ಬೈಕ್‌ನ ವೇಗ ಕಡಿಮೆ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಬಿದ್ದ ದಿನೇಶ ಅವರ ತಲೆಗೆ ತೀವ್ರ ಪೆಟ್ಟು ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಿತ್ತೂರು ಠಾಣೆಯ ಸಿಪಿಐ ರಾಘವೇಂದ್ರ ಹವಾಲ್ದಾರ, ಪಿಎಸ್‌ಐ ಮಲ್ಲಿಕಾರ್ಜುನ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ